25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

ಬೆಳ್ತಂಗಡಿ: ವರದಿ ಸಾಲಿನಲ್ಲಿ ಸಂಘವು ಒಟ್ಟು 679 ಸದಸ್ಯರನ್ನು ಹೊಂದಿದ್ದು,ರೂ. 17,43,500 ಪಾಲು ಬಂಡವಾಳ ಹೊಂದಿದೆ. ರೂ.5.97ಕೋಟಿ ಠೇವಣಿಯೊಂದಿಗೆ ರೂ.25 ಕೋಟಿ ವ್ಯವಹಾರ ನಡೆಸಿದೆ. ಸದಸ್ಯರಿಗೆ ಶೇ.13 ಡಿವಿಡೆಂಡ್ ನೀಡಲು ನಿರ್ಣಯಿಸಲಾಗಿದೆ ಎಂದು ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಲ್ಯಾನ್ಸಿ ಎ.ಪಿರೇರಾ ಹೇಳಿದರು.

ಅವರು ಸೆ.16 ರಂದು ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಕಳೆದ ಎಂಟು ವರ್ಷಗಳಿಂದ ನಮ್ಮ ಪ್ರೇರಣಾ ಸೌಹಾರ್ದ ಸಹಕಾರಿ ಸಂಘವು ಎಲ್ಲರ ಸಹಕಾರದಿಂದ ಉತ್ತಮ‌ ಸಾಧನೆ ಮಾಡಿದೆ ಎಂದರು.

ಸಂಘದ ಉಪಾಧ್ಯಕ್ಷ ವಿಲ್ಸನ್ ಜೋರ್ಜ್ ಗೊನ್ಸಾಲ್ವಿಸ್, ನಿರ್ದೇಶಕರಾದ ವಿನ್ಸೆಂಟ್ ಟಿ. ಡಿಸೋಜ, ಜಾನ್ ಅರ್ವಿನ್ ಡಿ’ಸೋಜಾ, ಎಲೋಸಿಯಸ್ ಎಸ್.ಲೋಬೊ, ಜಾನ್ ಆಲ್ವಿನ್ ಪಿಂಟೊ, ಮ್ಯಾಕ್ಸಿಂ ಡಿ ಕೋಸ್ಟಾ,ಬೆನಡಿಕ್ಟ್ ವೇಗಸ್, ಕು. ತಿಯೋಫಿಲಾ ಡಿಸೋಜ, ಸ್ಟೆಲ್ಲಾ ಫ್ರಾಂಕ್,ಸೆಲಿನ್ ನೊರೋನಾ ಉಪಸ್ಥಿತರಿದ್ದರು.

ಮುಖ್ಯಕಾರ್ಯನಿರ್ವಹಣಾಧಿಕಾರಿ ಐರಿನ್ ಡಿಸೋಜ ವಾರ್ಷಿಕ ವರದಿ ಮಂಡಿಸಿದರು. ಉಪಾಧ್ಯಕ್ಷ ವಿಲ್ಸನ್ ಗೊನ್ಸಾಲ್ವಿಸ್ ಸ್ವಾಗತಿಸಿದರು. ನಿರ್ದೇಶಕ ಜಾನ್ ಅರ್ವಿನ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.ಸಭೆಯಲ್ಲಿ ಲಕ್ಕಿ ಕೂಪನ್ ಡ್ರಾ ನಡೆಸಿ,ವಿಜೇತರಿಗೆ ಬಹುಮಾನ ನೀಡಲಾಯಿತು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್- ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಮೇ 3 -12: ಕಾಜೂರು ಉರೂಸ್ ಮಹಾಸಂಭ್ರಮ: ಮೇ 12 ರಂದು ಸರ್ವಧರ್ಮೀಯರ ಸೌಹಾರ್ದ ಸಂಗಮ- ಉರೂಸ್ ಸಮಾರೋಪ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಸಂದರ್ಭ ಸುರೇಶ ಪುತ್ತೂರಾಯರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya

ಮೇಲಂತಬೆಟ್ಟು: ದ.ಕ ಜಿಲ್ಲಾ ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ

Suddi Udaya
error: Content is protected !!