25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

ಬೆಳ್ತಂಗಡಿ: ವರದಿ ಸಾಲಿನಲ್ಲಿ ಸಂಘವು ಒಟ್ಟು 679 ಸದಸ್ಯರನ್ನು ಹೊಂದಿದ್ದು,ರೂ. 17,43,500 ಪಾಲು ಬಂಡವಾಳ ಹೊಂದಿದೆ. ರೂ.5.97ಕೋಟಿ ಠೇವಣಿಯೊಂದಿಗೆ ರೂ.25 ಕೋಟಿ ವ್ಯವಹಾರ ನಡೆಸಿದೆ. ಸದಸ್ಯರಿಗೆ ಶೇ.13 ಡಿವಿಡೆಂಡ್ ನೀಡಲು ನಿರ್ಣಯಿಸಲಾಗಿದೆ ಎಂದು ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಲ್ಯಾನ್ಸಿ ಎ.ಪಿರೇರಾ ಹೇಳಿದರು.

ಅವರು ಸೆ.16 ರಂದು ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಕಳೆದ ಎಂಟು ವರ್ಷಗಳಿಂದ ನಮ್ಮ ಪ್ರೇರಣಾ ಸೌಹಾರ್ದ ಸಹಕಾರಿ ಸಂಘವು ಎಲ್ಲರ ಸಹಕಾರದಿಂದ ಉತ್ತಮ‌ ಸಾಧನೆ ಮಾಡಿದೆ ಎಂದರು.

ಸಂಘದ ಉಪಾಧ್ಯಕ್ಷ ವಿಲ್ಸನ್ ಜೋರ್ಜ್ ಗೊನ್ಸಾಲ್ವಿಸ್, ನಿರ್ದೇಶಕರಾದ ವಿನ್ಸೆಂಟ್ ಟಿ. ಡಿಸೋಜ, ಜಾನ್ ಅರ್ವಿನ್ ಡಿ’ಸೋಜಾ, ಎಲೋಸಿಯಸ್ ಎಸ್.ಲೋಬೊ, ಜಾನ್ ಆಲ್ವಿನ್ ಪಿಂಟೊ, ಮ್ಯಾಕ್ಸಿಂ ಡಿ ಕೋಸ್ಟಾ,ಬೆನಡಿಕ್ಟ್ ವೇಗಸ್, ಕು. ತಿಯೋಫಿಲಾ ಡಿಸೋಜ, ಸ್ಟೆಲ್ಲಾ ಫ್ರಾಂಕ್,ಸೆಲಿನ್ ನೊರೋನಾ ಉಪಸ್ಥಿತರಿದ್ದರು.

ಮುಖ್ಯಕಾರ್ಯನಿರ್ವಹಣಾಧಿಕಾರಿ ಐರಿನ್ ಡಿಸೋಜ ವಾರ್ಷಿಕ ವರದಿ ಮಂಡಿಸಿದರು. ಉಪಾಧ್ಯಕ್ಷ ವಿಲ್ಸನ್ ಗೊನ್ಸಾಲ್ವಿಸ್ ಸ್ವಾಗತಿಸಿದರು. ನಿರ್ದೇಶಕ ಜಾನ್ ಅರ್ವಿನ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.ಸಭೆಯಲ್ಲಿ ಲಕ್ಕಿ ಕೂಪನ್ ಡ್ರಾ ನಡೆಸಿ,ವಿಜೇತರಿಗೆ ಬಹುಮಾನ ನೀಡಲಾಯಿತು.

Related posts

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾ ಮತ್ತು ಕರಕುಶಲ ಚಟುವಟಿಕೆ

Suddi Udaya

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು

Suddi Udaya

ಉದ್ಯೋಗಾವಕಾಶಗಳನ್ನು ಒದಗಿಸುವುದೇ ಗುರಿ – MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಸಂಸ್ಥೆಗಳ ಜಾಗೃತಿ ಅಭಿಯಾನದ ವಾಹನ ತಾಲೂಕಿನಾದ್ಯಂತ ಮನೆ ಬಾಗಿಲಿಗೆ – ಚಾರ್ಮಾಡಿಯಿಂದ ಚಾಲನೆ

Suddi Udaya

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಶಿರ್ಲಾಲು :ಬೆಳ್ತಂಗಡಿ ಕೋಟಿ ಚೆನ್ನಯ ಕ್ರೀಡಾಕೂಟ 2025 ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಜಿರೆ : ಹೊಸಪಟ್ಣ ನಿವಾಸಿ ಶ್ರೀಧರ ಪೂಜಾರಿ ನಿಧನ

Suddi Udaya
error: Content is protected !!