27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

ಬೆಳ್ತಂಗಡಿ .ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆಯು ಬೆಳ್ತಂಗಡಿ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಪದಾಧಿಕಾರಿಗಳೊಂದಿಗೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಒಳಗೆ ವಾಸಿಸುತ್ತಿರುವ ಬುಡಕಟ್ಟು ಕುಟುಂಬದ ಹಲವಾರು ಸಮಸ್ಯೆಗಳ ಬಗ್ಗೆ ವಿದ್ಯುತ್‌ ,ರಸ್ತೆ ,ಭೂ ಒಡೆತನದ ,ಬಗ್ಗೆ ಸಂವಾದ ವನ್ನು ನಡೆಸಿ.ಮುಂದಿನ ದಿನದಲ್ಲಿ ಬೆಳ್ತಂಗಡಿ ಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮಾವೇಶವನ್ನು ನಡೆಸಿ ಈ ಎಲ್ಲಾ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಪಟ್ಟ ಮಂತ್ರಿಗಳನ್ನು ಕರೆಸಿ ಪರಿಹಾರಕ್ಕೆಪ್ರಯತ್ನಿಸಲಾಗುತ್ತದೆ.ಎಂದರು..

ಪರಿಶಿಷ್ಟ ಪಂಗಡದಿಂದ ಸರ್ಕಾರ ನಾಮನಿರ್ದೇಶಿತ ಸದಸ್ಯರಾಗಿ ಅಯ್ಕೆಯಾಗಿರುವ ಸದಸ್ಯರನ್ನು ಅಭಿನಂದಿಸಲಾಯಿತು. ಶಾಸಕ ಹರೀಶ್ ಪೂಂಜ ಸವಣಾಲು ಹನ್ಯಾಡಿ ಪಿಲಿಕಲ ರಸ್ತೆ ದುರಸ್ತಿ ವೀಕ್ಷಣೆ ಸಂದರ್ಭದಲ್ಲಿ ಅದಿವಾಸಿ ಸಮುದಾಯದವರು ಪ್ರಶ್ನೆ ಮಾಡಿದ ಸಂದರ್ಭದಲ್ಲಿ ನಿಂದನಾತ್ಮಕ ಪದ ಬಳಸಿದಕ್ಕೆ ಖಂಡಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ನಾರಾಯಣ ನಾಯ್ಕ್ ,ಜಿಲ್ಲಾ ಸಂಯೋಜಕರಾದ ಚಿತ್ತರಂಜನ್ ಶೆಟ್ಟಿ ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ ಎಮ್ ನಾಗೇಶ್ ಕುಮಾರ್ ಗೌಡ ,ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್ ,ಜಿಲ್ಲಾ ಅರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಜಯರಾಮ್ ಎಮ್ ಕೆ, ಬೆಳ್ತಂಗಡಿ ನಗರ ಸಮಿತಿ ಅಧ್ಯಕ್ಷರಾದ ಜಯನಂದ ಪಿ,ಗ್ರಾಮೀಣ ಅಧ್ಯಕ್ಷರಾದ ಜಿನ್ನಪ್ಪ ನಾಯ್ಕ್ ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ,ತಾಲೂಕು ಅರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಶ್ರೀಮತಿ ಸವಿತಾ ,ತಾಲೂಕು ಆರಾಧನಾ ಸಮಿತಿಯ ಸದಸ್ಯರಾದ ಲಕ್ಷಣ್ ಮಲೆಕುಡಿಯ,ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಕೇಶವ ನಾಯ್ಕ್ ಒಡಿಲ್ನಾಳ ಹಾಗೂ ಸಮಿತಿ ಪ್ರಮುಖರು ಸದಸ್ಯರು ಉಪಸ್ಥಿತರಿದ್ದರು.

Related posts

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಪಹಣಿಗಳಿಗೆ ಆಧಾರ್ ಜೋಡನೆ ಆಂದೋಲನ

Suddi Udaya

ನ.16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya

ಆ. 3- 17: ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್: ಅಮೋಘ 10% ರಿಂದ 40% ವರೆಗೆ ಗ್ರಾಹಕರಿಗೆ ರಿಯಾಯಿತಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

Suddi Udaya
error: Content is protected !!