23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕೊಕ್ಕಡ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

ಕೊಕ್ಕಡ: ಬದ್ರಿಯಾ ಜುಮಾ ಮಸೀದಿ ಕೊಕ್ಕಡ ಇದರ ಅಧೀನ ಸಮಿತಿ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಕೊಕ್ಕಡ ಇದರ ಆಶ್ರಯದಲ್ಲಿ ಈದ್ ಮಿಲಾದ್ ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಖುವ್ವತ್ತುಲ್ ಇಸ್ಲಾಂ ಮದರಸದ ಮುಖ್ಯ ಗುರು ಶಮೀಮುದ್ದೀನ್ ಹುದವಿ ನೆರವೇರಿಸಿದರು.

“2024 ಮೀಲಾದೇ ಮದೀನ” ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಕೊಕ್ಕಡ ಇದರ ಅಧ್ಯಕ್ಷ ಖಾಲಿದ್ ಬಿ.ವೈ. ವಹಿಸಿದ್ದರು.

ದುಆ ಹಾಗೂ ಪ್ರಾಸ್ತಾವಿಕ ಭಾಷಣವನ್ನು ಬದ್ರಿಯಾ ಜುಮಾ ಮಸೀದಿ ಕೊಕ್ಕಡದ ಖತೀಬ ಸುಲ್ತಾನ್ ದಾರಿಮಿ ಯವರು ನೇತೃತ್ವ ನೀಡಿದರು.

ಸಮಾರೋಪ ಕಾರ್ಯಕ್ರಮದ ಧ್ವಜಾರೋಹಣ ಕಾರ್ಯಕ್ರಮವನ್ನು ಜಮಾದ್ ಕಮಿಟಿ ಅಧ್ಯಕ್ಷ ಹೈದರ್ ಎಂ.ಎಸ್ ರವರು ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಹಾಜಿ ಉಮರ್ ಶಾಲಿಮಾರ್, ಉಪಾಧ್ಯಕ್ಷ ಯುಸೂಫ್ ವೈ.ಎಂ.ಕೆ., ಎಸ್‌.ಕೆ.ಎಸ್‌.ಎಸ್‌.ಎಫ್ ಅಧ್ಯಕ್ಷ ಸಲೀಂ ಮುಂಡ್ರೇಲು ಹಾಗೂ ಆಡಳಿತ ಸಮಿತಿಯ ಪ್ರ. ಕಾರ್ಯದರ್ಶಿ ಅನ್ಸಾರ್, ಆಡಳಿತ ಸಮಿತಿಯ ಸದಸ್ಯರು, ಜಮಾದ್‌ನ ಸದಸ್ಯರು, ಉಪಸ್ಥಿತರಿದ್ದರು.

ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಕೊಕ್ಕಡ ಇದರ ಕಾರ್ಯದರ್ಶಿ ನೌಫಲ್ ಎಂ.ಎ. ಸ್ವಾಗತಿಸಿದರು.

Related posts

ಶತಾಯುಷಿ ಪಟ್ರಮೆ ಅಶ್ಚತ್ತಡಿ ನಿವಾಸಿ ಪಮಣ ಗೌಡ ನಿಧನ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಮುಸ್ಕಾನ್ ಕೌಸರ್ ರಿಗೆ ವಿದ್ಯಾರ್ಥಿ ವೇತನ

Suddi Udaya

ಬೆಳ್ತಂಗಡಿ ಆದಿನಾಥ್ ಬಜಾಜ್‌ನಲ್ಲಿ ಎಕ್ಸ್‌ಚೇಂಜ್ ಮತ್ತು ಲೋನ್ ಮೇಳ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಜಮಾಬಂದಿ: ವಿವಿಧ ಯೋಜನೆಗಳಲ್ಲಿ ಶೇ 98.07 – 15ನೇ ಹಣಕಾಸು ಯೋಜನೆಯಲ್ಲಿ ಶೇ 67.14 ಪ್ರಗತಿ

Suddi Udaya

ವನ್ಯಜೀವಿ ವಿಭಾಗದಿಂದ ಹುಲಿ ಗಣತಿ ಹಿನ್ನೆಲೆ: ನಾಳೆಯಿಂದ ಗಡಾಯಿಕಲ್ಲು ಸೇರಿದಂತೆ ಫಾಲ್ಸ್ ಗಳು ಬಂದ್

Suddi Udaya
error: Content is protected !!