24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕೊಕ್ಕಡ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

ಕೊಕ್ಕಡ: ಬದ್ರಿಯಾ ಜುಮಾ ಮಸೀದಿ ಕೊಕ್ಕಡ ಇದರ ಅಧೀನ ಸಮಿತಿ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಕೊಕ್ಕಡ ಇದರ ಆಶ್ರಯದಲ್ಲಿ ಈದ್ ಮಿಲಾದ್ ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಖುವ್ವತ್ತುಲ್ ಇಸ್ಲಾಂ ಮದರಸದ ಮುಖ್ಯ ಗುರು ಶಮೀಮುದ್ದೀನ್ ಹುದವಿ ನೆರವೇರಿಸಿದರು.

“2024 ಮೀಲಾದೇ ಮದೀನ” ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಕೊಕ್ಕಡ ಇದರ ಅಧ್ಯಕ್ಷ ಖಾಲಿದ್ ಬಿ.ವೈ. ವಹಿಸಿದ್ದರು.

ದುಆ ಹಾಗೂ ಪ್ರಾಸ್ತಾವಿಕ ಭಾಷಣವನ್ನು ಬದ್ರಿಯಾ ಜುಮಾ ಮಸೀದಿ ಕೊಕ್ಕಡದ ಖತೀಬ ಸುಲ್ತಾನ್ ದಾರಿಮಿ ಯವರು ನೇತೃತ್ವ ನೀಡಿದರು.

ಸಮಾರೋಪ ಕಾರ್ಯಕ್ರಮದ ಧ್ವಜಾರೋಹಣ ಕಾರ್ಯಕ್ರಮವನ್ನು ಜಮಾದ್ ಕಮಿಟಿ ಅಧ್ಯಕ್ಷ ಹೈದರ್ ಎಂ.ಎಸ್ ರವರು ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಹಾಜಿ ಉಮರ್ ಶಾಲಿಮಾರ್, ಉಪಾಧ್ಯಕ್ಷ ಯುಸೂಫ್ ವೈ.ಎಂ.ಕೆ., ಎಸ್‌.ಕೆ.ಎಸ್‌.ಎಸ್‌.ಎಫ್ ಅಧ್ಯಕ್ಷ ಸಲೀಂ ಮುಂಡ್ರೇಲು ಹಾಗೂ ಆಡಳಿತ ಸಮಿತಿಯ ಪ್ರ. ಕಾರ್ಯದರ್ಶಿ ಅನ್ಸಾರ್, ಆಡಳಿತ ಸಮಿತಿಯ ಸದಸ್ಯರು, ಜಮಾದ್‌ನ ಸದಸ್ಯರು, ಉಪಸ್ಥಿತರಿದ್ದರು.

ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಕೊಕ್ಕಡ ಇದರ ಕಾರ್ಯದರ್ಶಿ ನೌಫಲ್ ಎಂ.ಎ. ಸ್ವಾಗತಿಸಿದರು.

Related posts

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಹಿಪ್ ಬಾಯ್ಸ್ ಡಾನ್ಸ್ ಕ್ರೀವ್ ಉಜಿರೆ ವಿದ್ಯಾರ್ಥಿಗಳ ಸ್ವಾಗತ ಮತ್ತು ಡಾನ್ಸ್ ಸ್ಪರ್ಧೆ-ಡಾನ್ಸ್ ಬ್ಯಾಟಲ್-2024 ಕಾರ್ಯಕ್ರಮ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರತಿಭಟನೆ

Suddi Udaya

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

Suddi Udaya
error: Content is protected !!