July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

ಕಲ್ಮಂಜ: ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಕಲ್ಮಂಜದಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ಸೆ.17ರಂದು ನಡೆಯಿತು.

ಉದ್ಘಾಟನೆಯನ್ನು ರಘುರಾಮ ಶೆಟ್ಟಿ ಸಾಧನ ಗೌರವ ಸಲಹೆಗಾರರು ಯಕ್ಷದ್ರುವ ಪಟ್ಲ ಪೌಂಡೇಶನ್ ಬೆಳ್ತಂಗಡಿ ಘಟಕ ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಮಂಜುನಾಥ್ ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಸುರೇಶ್ ಶೆಟ್ಟಿ ಲಾಯಿಲ, ಅಧ್ಯಕ್ಷರು ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ. ಯಕ್ಷ ಗುರುಗಳಾದ ಈಶ್ವರ್ ಪ್ರಸಾದ್ ಧರ್ಮಸ್ಥಳ ಹಾಗೂ ಘಟಕದ ಪದಾಧಿಕಾರಿಗಳಾದ ವಸಂತ ಶೆಟ್ಟಿ ಶ್ರದ್ದಾ, ವೆಂಕಟರಮಣ ಶೆಟ್ಟಿ ಉಜಿರೆ, ದೇವರಾಜ್ ಉಜಿರೆ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿದರು. ಶಿಕ್ಷಕಿ ಸವಿತಾ ಧನ್ಯವಾದವಿತ್ತರು. ಶಿಕ್ಷಕ ಸುಧೀಂದ್ರ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಎಲ್ಲ ಶಿಕ್ಷಕರು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಹೆದ್ದಾರಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಮಳೆಗಾಲ ಪ್ರಾರಂಭ ಮುನ್ನ ಮುನ್ನೆಚ್ಚರಿಕೆ ವಹಿಸುವಂತೆ  ಜಿಲ್ಲಾಧಿಕಾರಿ ಮುಲೈ ಮುಗಿಲನ್ ರವರಿಗೆ ಬ್ರಿಜೇಶ್ ಚೌಟ ಮನವಿ

Suddi Udaya

ಶ್ರೀ ಮಹಾಗಣಪತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸೌತಡ್ಕದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬಂದಾರು ಗ್ರಾಮ -ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya
error: Content is protected !!