25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

ಧರ್ಮಸ್ಥಳ :ಇಲ್ಲಿಯ ಅಶೋಕನಗರದ ಹಿರಿಯ ಜೀವ
ನಾಟಿ ವೈದ್ಯರೆಂದೇ ಪ್ರಸಿದ್ಧರಾದ,ಐದನೇಯ ತಲೆಮಾರಾದ ಶತಾಯುಷಿ 110 ವರ್ಷ ವಯಸ್ಸಿನ ಶ್ರೀಮತಿ ನೊಕ್ಕೆ ಅಜ್ಜಿ ರವರು ವಯೋಸಹಜವಾಗಿ ಸೆ. 19ರಂದು ಸಂಜೆ ದೈವಾಧೀನರಾದರು.

ಮೃತರು ಮಕ್ಕಳು, ಮೊಮ್ಮಕ್ಕಳು,ಮರಿಮೊಮ್ಮಕ್ಕಳು ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.

ಅವರು ತಮ್ಮ ಜೀವಿತಾವಧಿಯಲ್ಲಿ ಸುಮಾರು 700 ಕ್ಕೂ ಅಧಿಕ ಹೆರಿಗೆಗಳನ್ನು ಸುಸೂತ್ರವಾಗಿ ನೆರವೇರಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಅಲ್ಲದೆ ಸುತ್ತಮುತ್ತಲ ಪರಿಸರದವರಿಗೆ ಸಣ್ಣಪುಟ್ಟ ಖಾಯಿಲೆಗಳಿಗೆ ನಾಟಿ ಮದ್ದು ಕೊಟ್ಟು ವಾಸಿ ಮಾಡುತಿದ್ದರು.

ತಲೆನೋವಿನ ಮದ್ದಿಗಾಗಿ ಪರವೂರಿನ ಜನರು ಕೂಡ ಇವರನ್ನು ಅರಸಿಕೊಂಡು ಬರುತ್ತಿದ್ದರು.ತಮಗೆ ವಿದ್ಯಾಭ್ಯಾಸ ಇಲ್ಲದಿದ್ದರೂ ಕೂಡ ಯಾವುದೇ ವೈದ್ಯರಿಗೆ ಕಡಿಮೆ ಇಲ್ಲದಂತೆ ಓರ್ವ ಪ್ರಸೂತಿ ತಜ್ಞೆಯಾಗಿ, ನಾಟಿ ವೈದ್ಯೆಯಾಗಿ ಊರಿನಲ್ಲಿ ಪ್ರಸಿದ್ಧಿಯನ್ನು ಪಡೆದಿದ್ದರು. ಅಲ್ಲದೆ ತುಳು ಸಂಧಿ – ಪಾಡ್ದನ ಹಾಡುವುದರಲ್ಲೂ ಇವರು ನಿಸ್ಸೀಮರಾಗಿದ್ದರು.
ಇವರು ಈ ಸಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದರು.

Related posts

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇವರ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಕಲ್ಪತರು ನರ್ಸಿಂಗ್ ಸ್ಕೂಲ್ ನಲ್ಲಿ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಿ.ಯದುಪತಿ ಗೌಡರಿಗೆ ಗೌರವಾರ್ಪಣೆ

Suddi Udaya

ಕಳೆಂಜ ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ರಿಗೆ ಮಾತೃ ವಿಯೋಗ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

Suddi Udaya

ನೆರಿಯದಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya
error: Content is protected !!