July 23, 2026
Uncategorized

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

ನಾವೂರು : ಇಲ್ಲಿಯ 6ನೇ ಮೈಲಿ ಕಲ್ಲಿನ ಬಳಿ ಗಂಪ, ನಾವೂರುಪಲ್ಕೆ, ಹೊಡಿಕ್ಕಾರ್, ಕಿರ್ನಡ್ಕ ಈ ಭಾಗಕ್ಕೆ ಸಂಪರ್ಕ ಕಲ್ಪಿಸುವ ಕಾಲು ದಾರಿ ಇದು ಖಾಸಗಿ ವ್ಯಕ್ತಿಗೆ ಸಂಬಂಧಪಟ್ಟ ಜಾಗ, ಆದರೆ ಇದರ ಬದಿಯಲ್ಲೇ ಮೇಲ್ಕಾಣಿಸಿದ ಹಲವಾರು ಮನೆಗಳಿಗೆ ಈ ದಾರಿಯ ಮುಖಾಂತರವೇ ಹಾದು ಹೋಗಬೇಕು ಆದರೆ ಎಫ್ಎಮ್‌ಬಿಯಲ್ಲಿ ಈ ಭಾಗಕ್ಕೆ ಹಾದು ಹೋಗುವ ಕಾಲುದಾರಿ ದಾಖಲೆ ಇದೆ,

ಆದರೆ ಈಗ ಈ ಜಾಗವನ್ನು ಖರೀದಿಸಿದ ವ್ಯಕ್ತಿ ತಡೆಗೋಡೆ ನಿರ್ಮಿಸಿರುತ್ತಾರೆ, ಆದರೆ ತಡೆಗೋಡೆ ನಿರ್ಮಿಸುವುದು ತಪ್ಪು ಎನ್ನುವುದು ಈ ಭಾಗದ ಜನರ ಅಭಿಪ್ರಾಯವಲ್ಲ, ಆದರೆ ತಡೆ ಗೋಡೆ ಮಾಡುವಾಗ ಸರಿಯಾದ ಮೋರಿಯನ್ನು ಹಾಕದೆ ನೀರು ನಿಂತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಪರಿಸರದ ಜನರಿಗೆ ಈಗ ಅಲ್ಲಿ ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆಯಾಗಿದೆ
( ಮೇಲ್ಕಾಣಿಸಿದ ಚಿತ್ರವನ್ನು ಸರಿಯಾಗಿ ಗಮನಿಸಿ )
ಈ ಸಮಸ್ಯೆಯನ್ನು ಜಾಗ ಖರೀದಿಸಿದ ವ್ಯಕ್ತಿಯ ಗಮನಕ್ಕೆ ತಂದಾಗ, ನಮ್ಮ ಬಗ್ಗೆ ಬೆಳ್ತಂಗಡಿ ಮತ್ತು ಮಂಗಳೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ,
ಅದಲ್ಲದೆ ನಮ್ಮ ಈ ಸಮಸ್ಯೆಯ ಬಗ್ಗೆ ಸುಮಾರು ಮೂರು ತಿಂಗಳ ಮೊದಲೇ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ದೂರು ನೀಡಿದ್ದು
ಅವರು ಯಾವುದೇ ಕ್ರಮ ಕೈಗೊಂಡಿಲ್ಲ . ಕೂಡಲೇ ಸಂಬಂದಿಸಿದವರು ನಮಗೆ ನಡೆದು ಕೊಂಡು ಹೋಗಲು ವ್ಯವಸ್ಥೆಗೆ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಿ ,

  • ನೊಂದ ಪರಿಸರವಾಸಿಗಳು

Related posts

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಕ್ರಮ ಗಣಿಗಾರಿಕೆ : ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಗೌಡ ಜಾಮೀನು

Suddi Udaya

ಎಸ್.ಡಿ.ಎಂ ಬಿ.ಎಡ್ ಕಾಲೇಜು ವಾರ್ಷಿಕೋತ್ಸವ

Suddi Udaya
error: Content is protected !!