24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಾಧಕರು

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

ಉಜಿರೆ: ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ ಸಂಭ್ರಮ-2024 ಒಷಿಯನ್ ಪರ್ಲ್ ಹೋಟೇಲ್ ನ ಸಭಾಂಗಣದಲ್ಲಿ ಸೆ.19 ರಂದು ನಡೆಯಿತು.

ವಿಧಾನ ಪರಿಷತ್ ಶಾಸಕ ಕೆ.ಪ್ರತಾಪಸಿಂಹ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಜಗತ್ತಿನ ಮುಂದೆ ಭಾರತ ಬಹಳ ದೊಡ್ಡ ದೇಶವಾಗಿ ಬೆಳೆಯುತ್ತಿದೆ.ಭಾರತದ ಸಾಧನೆ,ಬೆಳವಣಿಗೆ,ಪ್ರಗತಿಯ ಹಿಂದೆ ಇಂಜಿನಿಯರ್ಸ್ ಗಳ ಕೊಡುಗೆ ಅಪಾರ ಎಂದು ಹೇಳಿದರು.

ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ ಪಡೆದ ಸಂಪತ್ ರತ್ನ ರಾವ್,ಸುಭಾಶ್ಚಂದ್ರ, ಚೆಯರ್ ಮೆನ್ ಜಗದೀಶ್ ಪ್ರಸಾದ್ ಹಾಗೂ ಹಲವಾರು ಇಂಜಿನಿಯರ್ಸ್ ಸಾಧಕರನ್ನು, ಸಹಕಾರ ನೀಡಿದ ಮಹನೀಯರನ್ನು ಗೌರವಿಸಲಾಯಿತು.

ಕೆಪಿಸಿಇಎ ಇದರ ಅಧ್ಯಕ್ಷ ಶ್ರೀಕಾಂತ್ ಎಸ್, ಕಾರ್ಯದರ್ಶಿ ಅಜಿತ್ ಕುಮಾರ್ ಎಸ್.ಎಂ,ಸ್ಥಾಪಕ ಸದಸ್ಯ ಎಂ.ಆರ್ ಕಲ್ಗಲ್,ಡಾ.ಅಶ್ವಥ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ ಇದರ ಅಧ್ಯಕ್ಷ ಜಗದೀಶ್ ಪ್ರಸಾದ್ ಎನ್ ಎಲ್ಲರನ್ನು ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್,ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಅಶೋಕ್ ಕುಮಾರ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.ಕಾರ್ಯದರ್ಶಿ ಚೇತನ್ ಎಸ್,ಕೋಶಾಧಿಕಾರಿ ಕೇಶವ ಹಾಗೂ ನಾಗೇಶ್ ಎಂ,ಪ್ರಮೋದ್,ಸಿಜೋ ಜೋಸೆಫ್, ನಿತಿನ್ ಬಿ ಹಾಗೂ ಸದಸ್ಯರು ಸಹಕರಿಸಿದರು.ಚೈತ್ರಾ ಭಾರಧ್ವಾಜ್ ಪ್ರಾರ್ಥನೆ ಹಾಡಿದರು.

Related posts

ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಷಾ ವಿವಾದಾತ್ಮಕ ಹೇಳಿಕೆ ಹಾಗೂ ಸಚಿವೆ ವಿರುದ್ಧ ಸಿ.ಟಿ ರವಿ ಹೇಳಿಕೆ ವಿರೋಧಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

Suddi Udaya

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ : ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Suddi Udaya

ಮೂಡುಕೋಡಿ ಮುಂಡೇಲು ನಿವಾಸಿ ಪೂವಪ್ಪ ಮೂಲ್ಯ ನಿಧನ

Suddi Udaya

ಉಜಿರೆ: ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ನೂತನ ಒಳ ಕ್ರೀಡಾಂಗಣ ಪ್ರಾರಂಭೋತ್ಸವ ಮಕ್ಕಳ ಭವಿಷ್ಯಕ್ಕೆ ಆಧುನಿಕ ಶಿಕ್ಷಣ ಅಗತ್ಯ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಅಳದಂಗಡಿ ವರಮಹಾಲಕ್ಮಿ ಪೂಜಾ ಸಮಿತಿಯಿಂದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!