23.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಗಾಂಧಿನಗರದಲ್ಲಿ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವದ ಪ್ರಯುಕ್ತ ಕ್ರೀಡಾಕೂಟ

ಉಜಿರೆ: ಮೈತ್ರಿ ಫ್ರೆಂಡ್ಸ್ ಕ್ಲಬ್ ಗಾಂಧಿನಗರ ಹಾಗೂ ಮೈತ್ರಿ ಮಹಿಳಾ ಮಂಡಳಿ ಗಾಂಧಿನಗರ ಇವರ ಜಂಟಿ ಆಶ್ರಯದಲ್ಲಿ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವದ ಪ್ರಯುಕ್ತ ಕ್ರೀಡಾ ಕೂಟವು ಸೆ.15ರಂದು ಗಾಂಧಿನಗರ ವಠಾರದಲ್ಲಿ ನಡೆಯಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಅರವಿಂದ್ ಕಾರಂತ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಉಜಿರೆ, ಜಿಲ್ಲಾ ಕೆಡಿಪಿ ಸದಸ್ಯರು ಹಾಗೂ ನೋಟರಿ ವಕೀಲರಾದ ಸಂತೋಷ್ ಕುಮಾರ್, ಉಜಿರೆ ಗ್ರಾ.ಪಂ. ಮಾಜಿ ಉಪಾಧ್ಯಕ್ಷರು ಹಾಗೂ ತಾಲೂಕು ಅಕ್ರಮ-ಸಕ್ರಮ ಸಮಿತಿಯ ಸದಸ್ಯೆ ವಿನುತಾ ರಜತ್ ಗೌಡ, ಶಾರೀರಿಕ ಶಿಕ್ಷಕ ಸಂಜೀವ, ಮೂಡುಬಿದಿರೆ ಎಕ್ಸೆಲೆಂಟ್ ಕಾಲೇಜಿನ ಉಪನ್ಯಾಸಕ ಚಂದ್ರಪ್ಪ ಮದ್ದಡ್ಕ, ಗ್ರಾ.ಪಂ.ಸದಸ್ಯ ದಿನೇಶ್‌ ಆಗಮಿಸಿದ್ದರು.

ಮೈತ್ರಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷ ರಮೇಶ್, ಗೌರವಾಧ್ಯಕ್ಷ ಕೆ. ಶ್ರೀನಿವಾಸ ಗಾಂಧಿನಗರ ಮತ್ತು ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸೇನೆಯಿಂದ ನಿವೃತ್ತರಾಗಿ ಆಗಮಿಸಿದ ಸುಬೇದಾರ್ ಮೆಲ್ವಿನ್ ಫೆರ್ನಾಂಡಿಸ್, ಗ್ರಾ.ಪಂ. ನ ಹಿರಿಯ ಸಿಬ್ಬಂದಿ ಓಡಿ, ಅರಣ್ಯ ಇಲಾಖೆಯಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದ ಕಮಲ, ಹಾಗೂ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು.

Related posts

ಬೆಳ್ತಂಗಡಿ ಎಸ್‌.ಐ.ಟಿ ಕಚೇರಿಗೆ ಹಾಜರಾದ ಜಯಂತ್.ಟಿ

Suddi Udaya

ಉಜಿರೆ: ವಿವೇಕಾನಂದನಗರ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜಿನಲ್ಲಿ “ಯುರೇಕಾ 2025”- ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಏ.7 ರಿಂದ 12 ರ ವರೆಗೆ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಪಿಎಮ್ ಕಿಸಾನ್ ಯೋಜನೆಯ ಇ-ಕೆವೈಸಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕಳೆದು ಹೋದಂತಹ ಚಿನ್ನದ ಬ್ರೇಸ್ಲೆಟ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಮಂಜೊಟ್ಟಿಯ ಶ್ರೀಧರ್ ಶೆಟ್ಟಿ

Suddi Udaya
error: Content is protected !!