ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತುನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿಪಡಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಸಂಸದರಾಗಿ ಚುನಾಯಿತರಾದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ನಡೆಯಲಿದೆ.
ಸೆಪ್ಟೆಂಬರ್ 26ರಂದು ಅಧಿಸೂಚನೆ ಪ್ರಕಟವಾಗಿದ್ದು, ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ಅಕ್ಟೋಬರ್ 3 ನಾಮಪತ್ರ ಸಲ್ಲಿಕೆ ಗೆ ಕೊನೆಯ ದಿನವಾಗಿದೆ.
ಅಕ್ಟೋಬರ್ 4 ನಾಮಪತ್ರಗಳ ಪರಿಶೀಲನೆ, ಅಕ್ಟೋಬರ್ 7 ನಾಮಪತ್ರಗಳ ಹಿಂತೆಗೆತಕ್ಕೆ ಕೊನೆಯ ದಿನವಾಗಿದೆ. ಅಕ್ಟೋಬರ್ 21 ಮತದಾನ ಬೆಳಿಗ್ಗೆ
8:00 ರಿಂದ ಸಂಜೆ 4.00ರವರೆಗೆ ನಡೆಯಲಿದೆ. ಅಕ್ಟೋಬರ್ 24 ಮತ ಎಣಿಕೆ ನಡೆಯಲಿದೆ

Leave a Comment

error: Content is protected !!