22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತುನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿಪಡಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಸಂಸದರಾಗಿ ಚುನಾಯಿತರಾದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ನಡೆಯಲಿದೆ.
ಸೆಪ್ಟೆಂಬರ್ 26ರಂದು ಅಧಿಸೂಚನೆ ಪ್ರಕಟವಾಗಿದ್ದು, ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ಅಕ್ಟೋಬರ್ 3 ನಾಮಪತ್ರ ಸಲ್ಲಿಕೆ ಗೆ ಕೊನೆಯ ದಿನವಾಗಿದೆ.
ಅಕ್ಟೋಬರ್ 4 ನಾಮಪತ್ರಗಳ ಪರಿಶೀಲನೆ, ಅಕ್ಟೋಬರ್ 7 ನಾಮಪತ್ರಗಳ ಹಿಂತೆಗೆತಕ್ಕೆ ಕೊನೆಯ ದಿನವಾಗಿದೆ. ಅಕ್ಟೋಬರ್ 21 ಮತದಾನ ಬೆಳಿಗ್ಗೆ
8:00 ರಿಂದ ಸಂಜೆ 4.00ರವರೆಗೆ ನಡೆಯಲಿದೆ. ಅಕ್ಟೋಬರ್ 24 ಮತ ಎಣಿಕೆ ನಡೆಯಲಿದೆ

Related posts

ನಡ -ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ರಚನೆ: ಅಧ್ಯಕ್ಷರಾಗಿ ಜಾಕೀರ್ ಹುಸೇನ್

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ “POCSO ಕಾಯ್ದೆ ಜಾಗೃತಿ” ಕಾರ್ಯಕ್ರಮ

Suddi Udaya

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಲೋಗೋ ಅನಾವರಣ

Suddi Udaya

ನಿಡ್ಲೆ: ಕಂರ್ಬಿತ್ಲು ನಿವಾಸಿ ಅಚ್ಚುತ ಹೆಬ್ಬಾರ್ ನಿಧನ

Suddi Udaya
error: Content is protected !!