ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಅಕ್ಷಯನಗರದ ನಿವಾಸಿ ತನಿಯ (67ವ) ಎಂಬವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಸೆ.19) ವರದಿಯಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.

ಮೃತರ ಪತ್ನಿ ಮೂರು ತಿಂಗಳ ಹಿಂದೆ ನಿಧನವಾಗಿದ್ದು, ಓರ್ವೆ ಪುತ್ರಿಯನ್ನು ಅಗಲಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದೆ ಎಂದು ತಿಳಿದು ಬಂದಿದೆ.

Leave a Comment

error: Content is protected !!