25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

ಧರ್ಮಸ್ಥಳ :ಇಲ್ಲಿಯ ಅಶೋಕನಗರದ ಹಿರಿಯ ಜೀವ
ನಾಟಿ ವೈದ್ಯರೆಂದೇ ಪ್ರಸಿದ್ಧರಾದ,ಐದನೇಯ ತಲೆಮಾರಾದ ಶತಾಯುಷಿ 110 ವರ್ಷ ವಯಸ್ಸಿನ ಶ್ರೀಮತಿ ನೊಕ್ಕೆ ಅಜ್ಜಿ ರವರು ವಯೋಸಹಜವಾಗಿ ಸೆ. 19ರಂದು ಸಂಜೆ ದೈವಾಧೀನರಾದರು.

ಮೃತರು ಮಕ್ಕಳು, ಮೊಮ್ಮಕ್ಕಳು,ಮರಿಮೊಮ್ಮಕ್ಕಳು ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.

ಅವರು ತಮ್ಮ ಜೀವಿತಾವಧಿಯಲ್ಲಿ ಸುಮಾರು 700 ಕ್ಕೂ ಅಧಿಕ ಹೆರಿಗೆಗಳನ್ನು ಸುಸೂತ್ರವಾಗಿ ನೆರವೇರಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಅಲ್ಲದೆ ಸುತ್ತಮುತ್ತಲ ಪರಿಸರದವರಿಗೆ ಸಣ್ಣಪುಟ್ಟ ಖಾಯಿಲೆಗಳಿಗೆ ನಾಟಿ ಮದ್ದು ಕೊಟ್ಟು ವಾಸಿ ಮಾಡುತಿದ್ದರು.

ತಲೆನೋವಿನ ಮದ್ದಿಗಾಗಿ ಪರವೂರಿನ ಜನರು ಕೂಡ ಇವರನ್ನು ಅರಸಿಕೊಂಡು ಬರುತ್ತಿದ್ದರು.ತಮಗೆ ವಿದ್ಯಾಭ್ಯಾಸ ಇಲ್ಲದಿದ್ದರೂ ಕೂಡ ಯಾವುದೇ ವೈದ್ಯರಿಗೆ ಕಡಿಮೆ ಇಲ್ಲದಂತೆ ಓರ್ವ ಪ್ರಸೂತಿ ತಜ್ಞೆಯಾಗಿ, ನಾಟಿ ವೈದ್ಯೆಯಾಗಿ ಊರಿನಲ್ಲಿ ಪ್ರಸಿದ್ಧಿಯನ್ನು ಪಡೆದಿದ್ದರು. ಅಲ್ಲದೆ ತುಳು ಸಂಧಿ – ಪಾಡ್ದನ ಹಾಡುವುದರಲ್ಲೂ ಇವರು ನಿಸ್ಸೀಮರಾಗಿದ್ದರು.
ಇವರು ಈ ಸಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದರು.

Related posts

ಉಜಿರೆ ಎಸ್. ಡಿ.ಎಂ ಕಾಲೇಜು : ಎನ್ ಎಸ್ ಎಸ್ ಘಟಕಕ್ಕೆ ಸುವರ್ಣ ಸಂಭ್ರಮ: ಅ.5:ಹಿರಿಯ ಸ್ವಯಂಸೇವಕರ ಒಗ್ಗೂಡುವಿಕೆಯಲ್ಲಿ ‘ ಸುವರ್ಣ ಸಮ್ಮಿಲನ ‘ ಕಾರ್ಯಕ್ರಮ

Suddi Udaya

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ಕೆನರಾ ಬ್ಯಾಂಕ್ ವತಿಯಿಂದ ನಿಡ್ಲೆ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆ

Suddi Udaya
error: Content is protected !!