32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

ಧರ್ಮಸ್ಥಳ :ಇಲ್ಲಿಯ ಅಶೋಕನಗರದ ಹಿರಿಯ ಜೀವ
ನಾಟಿ ವೈದ್ಯರೆಂದೇ ಪ್ರಸಿದ್ಧರಾದ,ಐದನೇಯ ತಲೆಮಾರಾದ ಶತಾಯುಷಿ 110 ವರ್ಷ ವಯಸ್ಸಿನ ಶ್ರೀಮತಿ ನೊಕ್ಕೆ ಅಜ್ಜಿ ರವರು ವಯೋಸಹಜವಾಗಿ ಸೆ. 19ರಂದು ಸಂಜೆ ದೈವಾಧೀನರಾದರು.

ಮೃತರು ಮಕ್ಕಳು, ಮೊಮ್ಮಕ್ಕಳು,ಮರಿಮೊಮ್ಮಕ್ಕಳು ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.

ಅವರು ತಮ್ಮ ಜೀವಿತಾವಧಿಯಲ್ಲಿ ಸುಮಾರು 700 ಕ್ಕೂ ಅಧಿಕ ಹೆರಿಗೆಗಳನ್ನು ಸುಸೂತ್ರವಾಗಿ ನೆರವೇರಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಅಲ್ಲದೆ ಸುತ್ತಮುತ್ತಲ ಪರಿಸರದವರಿಗೆ ಸಣ್ಣಪುಟ್ಟ ಖಾಯಿಲೆಗಳಿಗೆ ನಾಟಿ ಮದ್ದು ಕೊಟ್ಟು ವಾಸಿ ಮಾಡುತಿದ್ದರು.

ತಲೆನೋವಿನ ಮದ್ದಿಗಾಗಿ ಪರವೂರಿನ ಜನರು ಕೂಡ ಇವರನ್ನು ಅರಸಿಕೊಂಡು ಬರುತ್ತಿದ್ದರು.ತಮಗೆ ವಿದ್ಯಾಭ್ಯಾಸ ಇಲ್ಲದಿದ್ದರೂ ಕೂಡ ಯಾವುದೇ ವೈದ್ಯರಿಗೆ ಕಡಿಮೆ ಇಲ್ಲದಂತೆ ಓರ್ವ ಪ್ರಸೂತಿ ತಜ್ಞೆಯಾಗಿ, ನಾಟಿ ವೈದ್ಯೆಯಾಗಿ ಊರಿನಲ್ಲಿ ಪ್ರಸಿದ್ಧಿಯನ್ನು ಪಡೆದಿದ್ದರು. ಅಲ್ಲದೆ ತುಳು ಸಂಧಿ – ಪಾಡ್ದನ ಹಾಡುವುದರಲ್ಲೂ ಇವರು ನಿಸ್ಸೀಮರಾಗಿದ್ದರು.
ಇವರು ಈ ಸಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದರು.

Related posts

ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತ: ಮುಂಡೂರಿನ ಯುವಕ ಸ್ಥಳದಲ್ಲೇ ಮೃತ್ಯು

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ; ಉಮೇಶ್ ಶೆಟ್ಟಿ ಉಜಿರೆ ಬಳಗದ ಸದಸ್ಯರ ಪದಗ್ರಹಣ

Suddi Udaya
error: Content is protected !!