September 6, 2026
Uncategorized

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

ನಾವೂರು : ಇಲ್ಲಿಯ 6ನೇ ಮೈಲಿ ಕಲ್ಲಿನ ಬಳಿ ಗಂಪ, ನಾವೂರುಪಲ್ಕೆ, ಹೊಡಿಕ್ಕಾರ್, ಕಿರ್ನಡ್ಕ ಈ ಭಾಗಕ್ಕೆ ಸಂಪರ್ಕ ಕಲ್ಪಿಸುವ ಕಾಲು ದಾರಿ ಇದು ಖಾಸಗಿ ವ್ಯಕ್ತಿಗೆ ಸಂಬಂಧಪಟ್ಟ ಜಾಗ, ಆದರೆ ಇದರ ಬದಿಯಲ್ಲೇ ಮೇಲ್ಕಾಣಿಸಿದ ಹಲವಾರು ಮನೆಗಳಿಗೆ ಈ ದಾರಿಯ ಮುಖಾಂತರವೇ ಹಾದು ಹೋಗಬೇಕು ಆದರೆ ಎಫ್ಎಮ್‌ಬಿಯಲ್ಲಿ ಈ ಭಾಗಕ್ಕೆ ಹಾದು ಹೋಗುವ ಕಾಲುದಾರಿ ದಾಖಲೆ ಇದೆ,

ಆದರೆ ಈಗ ಈ ಜಾಗವನ್ನು ಖರೀದಿಸಿದ ವ್ಯಕ್ತಿ ತಡೆಗೋಡೆ ನಿರ್ಮಿಸಿರುತ್ತಾರೆ, ಆದರೆ ತಡೆಗೋಡೆ ನಿರ್ಮಿಸುವುದು ತಪ್ಪು ಎನ್ನುವುದು ಈ ಭಾಗದ ಜನರ ಅಭಿಪ್ರಾಯವಲ್ಲ, ಆದರೆ ತಡೆ ಗೋಡೆ ಮಾಡುವಾಗ ಸರಿಯಾದ ಮೋರಿಯನ್ನು ಹಾಕದೆ ನೀರು ನಿಂತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಪರಿಸರದ ಜನರಿಗೆ ಈಗ ಅಲ್ಲಿ ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆಯಾಗಿದೆ
( ಮೇಲ್ಕಾಣಿಸಿದ ಚಿತ್ರವನ್ನು ಸರಿಯಾಗಿ ಗಮನಿಸಿ )
ಈ ಸಮಸ್ಯೆಯನ್ನು ಜಾಗ ಖರೀದಿಸಿದ ವ್ಯಕ್ತಿಯ ಗಮನಕ್ಕೆ ತಂದಾಗ, ನಮ್ಮ ಬಗ್ಗೆ ಬೆಳ್ತಂಗಡಿ ಮತ್ತು ಮಂಗಳೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ,
ಅದಲ್ಲದೆ ನಮ್ಮ ಈ ಸಮಸ್ಯೆಯ ಬಗ್ಗೆ ಸುಮಾರು ಮೂರು ತಿಂಗಳ ಮೊದಲೇ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ದೂರು ನೀಡಿದ್ದು
ಅವರು ಯಾವುದೇ ಕ್ರಮ ಕೈಗೊಂಡಿಲ್ಲ . ಕೂಡಲೇ ಸಂಬಂದಿಸಿದವರು ನಮಗೆ ನಡೆದು ಕೊಂಡು ಹೋಗಲು ವ್ಯವಸ್ಥೆಗೆ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಿ ,

  • ನೊಂದ ಪರಿಸರವಾಸಿಗಳು

Related posts

ನೇತ್ರಾವತಿ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ತೆರವು ಕಾರ್ಯ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಬೆಳಾಲು ಪ್ರೌಢಶಾಲೆ ವ್ಯಕ್ತಿತ್ವ ವಿಕಾಸನ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಂಗಳೂರು: ಸೋಮೇಶ್ವರ ಪುರಸಭೆ ಚುನಾವಣೆ: ಬೆಳ್ತಂಗಡಿ ಮೂಲದ ಬಳಂಜ ಜಯ ಪೂಜಾರಿ ನಿಟ್ಟಡ್ಕ ರವರಿಗೆ ಭರ್ಜರಿ ಗೆಲುವು

Suddi Udaya

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya
error: Content is protected !!