ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳಾಲು ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಬೆಳಾಲು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇಲ್ಲಿ ಅವರ ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯಕ್ಕೆ ಬೆಳಾಲು ಬೂತ್178ರ ವತಿಯಿಂದ ಪೂಜೆ ಮತ್ತು ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಅಧ್ಯಕ್ಷೆ ಹಾಗೂ ಬೆಳಾಲು ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಬೆಳಾಲು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯ ಸತೀಶ್ ಎಳ್ಳುಗದ್ದೆ, ಶ್ರೀನಿವಾಸ್ ಗೌಡ ವಕೀಲರು, ಶ್ರೀ ಸೌಧ ಬೆಳಾಲು, ಬೂತ್ ನ ಕಾರ್ಯಕರ್ತರು ಪಾಲ್ಗೊಂಡಿದ್ದರು.

Leave a Comment

error: Content is protected !!