37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿ , ಅನುದಾನಿತ ಪ್ರೌಢಶಾಲೆ ನಾರಾವಿ ಇಲ್ಲಿನ ಹಿಂದಿ ಶಿಕ್ಷಕರಾದ ಶ್ರೀ ಗೋಪಾಲಕೃಷ್ಣ ತುಳುಪುಳೆ ಮಾತನಾಡಿ ರಾಷ್ಟ್ರಭಾಷೆ ಹಿಂದಿಯ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ಶ್ರೀ ಜಯರಾಮ ಮಯ್ಯ ಮಾತನಾಡಿ ಭಾಷೆಯು ಮನಸ್ಸಿನ ಭಾವನೆಯನ್ನು ತಿಳಿಸುವ ಮಾಧ್ಯಮವಾಗಿದೆ. ಭಾಷೆಗಳನ್ನು ಕಲಿಯುವುದರಿಂದ ಸಂಪರ್ಕ ಸಾಧಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಭವಾನಿ ಮಾರ್ಪಾಲು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಗಣೇಶ್ ಕನಿಕ್ಕಿಲ, ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಶಿಕ್ಷಕರಾದ ಶ್ರೀ ಜಗದೀಶ್ ಉಪಸ್ಥಿತರಿದ್ದು ಹಿಂದಿ ದಿವಸದ ಕುರಿತು ಮಾತನಾಡಿದರು. ವಿದ್ಯಾರ್ಥಿ ಲೋಕೇಶ್ ಹಿಂದಿ ಭಾಷೆಯ ಕುರಿತು ಮಾತನಾಡಿದರು. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಮಕ್ಕಳಿಂದ ನೃತ್ಯ, ಕಿರು ಪ್ರಹಸನ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಸಂಯೋಜಕರಾದ ಹಿಂದಿ ಶಿಕ್ಷಕಿ ಶ್ರೀಮತಿ ರಾಜಶ್ರೀಯವರು ಅವರು ಸ್ವಾಗತಿಸಿ ವಿದ್ಯಾರ್ಥಿಗಳಾದ ಲಿಖಿತ ವಂದಿಸಿ ಇಂದುಮತಿ ಮತ್ತು ಸೃಷ್ಟಿ ನಿರೂಪಿಸಿದರು.

Related posts

ಬೆಳ್ತಂಗಡಿ : ಕೆಇಬಿ ರಸ್ತೆ -ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕ ರಸ್ತೆಗೆ ಅನುದಾನ ಒದಗಿಸುವಂತೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

Suddi Udaya

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ನವಜೀವನೋತ್ಸವ ಕಾರ್ಯಕ್ರಮ: ಪಾನ ಮುಕ್ತ ಗ್ರಾಮ ಸಾಧಕರಿಗೆ ಗೌರವ-ಜಾಗೃತಿ ಅಣ್ಣ ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ಕೇಂದ್ರದಲ್ಲಿ ಎನ್ ಡಿ ಎ ಬಿಜೆಪಿ ಮೋದಿ ಸರಕಾರ 10ನೇ ವರ್ಷಕ್ಕೆ ಪಾದಾರ್ಪಣೆ :ಪ್ರತಾಪಸಿಂಹ ನಾಯಕ್

Suddi Udaya

ಯುಗಾದಿ ನವ ಪಲ್ಲವಕೆ ನಾಂದಿ – ಸ್ನೇಹ ಕೂಟ ಕಾರ್ಯಕ್ರಮ

Suddi Udaya
error: Content is protected !!