22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿ , ಅನುದಾನಿತ ಪ್ರೌಢಶಾಲೆ ನಾರಾವಿ ಇಲ್ಲಿನ ಹಿಂದಿ ಶಿಕ್ಷಕರಾದ ಶ್ರೀ ಗೋಪಾಲಕೃಷ್ಣ ತುಳುಪುಳೆ ಮಾತನಾಡಿ ರಾಷ್ಟ್ರಭಾಷೆ ಹಿಂದಿಯ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ಶ್ರೀ ಜಯರಾಮ ಮಯ್ಯ ಮಾತನಾಡಿ ಭಾಷೆಯು ಮನಸ್ಸಿನ ಭಾವನೆಯನ್ನು ತಿಳಿಸುವ ಮಾಧ್ಯಮವಾಗಿದೆ. ಭಾಷೆಗಳನ್ನು ಕಲಿಯುವುದರಿಂದ ಸಂಪರ್ಕ ಸಾಧಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಭವಾನಿ ಮಾರ್ಪಾಲು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಗಣೇಶ್ ಕನಿಕ್ಕಿಲ, ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಶಿಕ್ಷಕರಾದ ಶ್ರೀ ಜಗದೀಶ್ ಉಪಸ್ಥಿತರಿದ್ದು ಹಿಂದಿ ದಿವಸದ ಕುರಿತು ಮಾತನಾಡಿದರು. ವಿದ್ಯಾರ್ಥಿ ಲೋಕೇಶ್ ಹಿಂದಿ ಭಾಷೆಯ ಕುರಿತು ಮಾತನಾಡಿದರು. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಮಕ್ಕಳಿಂದ ನೃತ್ಯ, ಕಿರು ಪ್ರಹಸನ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಸಂಯೋಜಕರಾದ ಹಿಂದಿ ಶಿಕ್ಷಕಿ ಶ್ರೀಮತಿ ರಾಜಶ್ರೀಯವರು ಅವರು ಸ್ವಾಗತಿಸಿ ವಿದ್ಯಾರ್ಥಿಗಳಾದ ಲಿಖಿತ ವಂದಿಸಿ ಇಂದುಮತಿ ಮತ್ತು ಸೃಷ್ಟಿ ನಿರೂಪಿಸಿದರು.

Related posts

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ವಿವಿಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಮೂರು ದಿನದ ಅಂತರದಲ್ಲಿ ಸಹೋದರರಿಬ್ಬರ ಸಾವು

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಬೆಂಬಲ

Suddi Udaya

ಬೆಳ್ತಂಗಡಿ: ಡಾ. ಸುಶ್ಮಿತಾ ಸಿ ಎಚ್ ರವರಿಗೆ ಪಿಹೆಚ್ ಡಿ ಪದವಿ

Suddi Udaya
error: Content is protected !!