ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya

ಬೆಳ್ತಂಗಡಿ: ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಮುಂಡಾಜೆ ನಿವಾಸಿ ತೇಜಲ್ ಕೆ.ಆರ್. 20 ವರ್ಷ ವಯೋಮಿತಿಯ ವಿಭಾಗದಲ್ಲಿ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ ಗಳಿಸಿ ಪಾಂಡಿಚೇರಿಯಲ್ಲಿ ನಡೆಯಲಿರುವ ದಕ್ಷಿಣ ವಲಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಮುಂಡಾಜೆ ನಿವಾಸಿ ರಾಷ್ಟ್ರೀಯ ಮಟ್ಟದ ಕ್ರೀಡಾಪಟುವಾಗಿದ್ದ ರಾಜೇಶ್ ಕೆ.ವಿ. ಹಾಗೂ ಜಿನ್ಸಿ ದಂಪತಿ ಪುತ್ರನಾಗಿರುವ ತೇಜಲ್ ಕೆ.ಆರ್. ಆಳ್ವಾಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ. ಇವರು 2022ರಲ್ಲಿ ಬೆಂಗಳೂರಿನಲ್ಲಿ ನಡೆದ ಕ್ರೀಡಾಕೂಟದಲ್ಲಿ 16 ವಯೋಮಾನದ ವಿಭಾಗದಲ್ಲಿ ಹರ್ಡಲ್ಸ್‌ನಲ್ಲಿ ರಾಜ್ಯ ದಾಖಲೆಯೊಂದಿಗೆ ಚಿನ್ನದ ಪದಕ ಗಳಿಸಿದ್ದರು. ಮೈಸೂರಿನಲ್ಲಿ ನಡೆದಿದ್ದ ರಾಜ್ಯಮಟ್ಟದ ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ರೀಡಾಕೂಟದಲ್ಲಿ 110ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ ಗಳಿಸಿದ್ದ ಅವರು 2022-23ರ ಕರ್ನಾಟಕ ಜೂನಿಯರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 18 ವರ್ಷ ವಯೋಮಿತಿಯಲ್ಲಿ ಬೆಳ್ಳಿಯ ಪದಕ ಗಳಿಸಿದ್ದರು. ಇವರಿಗೆ ಶಾಂತರಾಮ್ ರವರು ತರಬೇತಿ ನೀಡುತ್ತಿದ್ದಾರೆ.

Leave a Comment

error: Content is protected !!