22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

ಬೆಳ್ತಂಗಡಿ: ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಮುಂಡಾಜೆ ನಿವಾಸಿ ತೇಜಲ್ ಕೆ.ಆರ್. 20 ವರ್ಷ ವಯೋಮಿತಿಯ ವಿಭಾಗದಲ್ಲಿ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ ಗಳಿಸಿ ಪಾಂಡಿಚೇರಿಯಲ್ಲಿ ನಡೆಯಲಿರುವ ದಕ್ಷಿಣ ವಲಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಮುಂಡಾಜೆ ನಿವಾಸಿ ರಾಷ್ಟ್ರೀಯ ಮಟ್ಟದ ಕ್ರೀಡಾಪಟುವಾಗಿದ್ದ ರಾಜೇಶ್ ಕೆ.ವಿ. ಹಾಗೂ ಜಿನ್ಸಿ ದಂಪತಿ ಪುತ್ರನಾಗಿರುವ ತೇಜಲ್ ಕೆ.ಆರ್. ಆಳ್ವಾಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ. ಇವರು 2022ರಲ್ಲಿ ಬೆಂಗಳೂರಿನಲ್ಲಿ ನಡೆದ ಕ್ರೀಡಾಕೂಟದಲ್ಲಿ 16 ವಯೋಮಾನದ ವಿಭಾಗದಲ್ಲಿ ಹರ್ಡಲ್ಸ್‌ನಲ್ಲಿ ರಾಜ್ಯ ದಾಖಲೆಯೊಂದಿಗೆ ಚಿನ್ನದ ಪದಕ ಗಳಿಸಿದ್ದರು. ಮೈಸೂರಿನಲ್ಲಿ ನಡೆದಿದ್ದ ರಾಜ್ಯಮಟ್ಟದ ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ರೀಡಾಕೂಟದಲ್ಲಿ 110ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ ಗಳಿಸಿದ್ದ ಅವರು 2022-23ರ ಕರ್ನಾಟಕ ಜೂನಿಯರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 18 ವರ್ಷ ವಯೋಮಿತಿಯಲ್ಲಿ ಬೆಳ್ಳಿಯ ಪದಕ ಗಳಿಸಿದ್ದರು. ಇವರಿಗೆ ಶಾಂತರಾಮ್ ರವರು ತರಬೇತಿ ನೀಡುತ್ತಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಭಗೀರಥ ಜಿ ಹಾಗೂ ಉಪಾಧ್ಯಕ್ಷರಾಗಿ ಜಗದೀಶ್ಚಂದ್ರ ಡಿ.ಕೆ ಆಯ್ಕೆ

Suddi Udaya

ನಡ ಗ್ರಾಮ ಪಂಚಾಯಿತಿಯ ಮಕ್ಕಳ ವಿಶೇಷ ಗ್ರಾಮ ಸಭೆ

Suddi Udaya

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ಳಿಬೀಡು ಹೇಮರಾಜ್ ಕೆ ಅವರಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಂ ವತಿಯಿಂದ ಗುರು ಜಯಂತಿ ಆಚರಣೆ

Suddi Udaya

ಬಳ್ಳಮಂಜ : ರಾಜೀವಿ ಶೆಟ್ಟಿ ನಿಧನ

Suddi Udaya
error: Content is protected !!