23.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

ಬೆಳ್ತಂಗಡಿ: ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಮುಂಡಾಜೆ ನಿವಾಸಿ ತೇಜಲ್ ಕೆ.ಆರ್. 20 ವರ್ಷ ವಯೋಮಿತಿಯ ವಿಭಾಗದಲ್ಲಿ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ ಗಳಿಸಿ ಪಾಂಡಿಚೇರಿಯಲ್ಲಿ ನಡೆಯಲಿರುವ ದಕ್ಷಿಣ ವಲಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಮುಂಡಾಜೆ ನಿವಾಸಿ ರಾಷ್ಟ್ರೀಯ ಮಟ್ಟದ ಕ್ರೀಡಾಪಟುವಾಗಿದ್ದ ರಾಜೇಶ್ ಕೆ.ವಿ. ಹಾಗೂ ಜಿನ್ಸಿ ದಂಪತಿ ಪುತ್ರನಾಗಿರುವ ತೇಜಲ್ ಕೆ.ಆರ್. ಆಳ್ವಾಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ. ಇವರು 2022ರಲ್ಲಿ ಬೆಂಗಳೂರಿನಲ್ಲಿ ನಡೆದ ಕ್ರೀಡಾಕೂಟದಲ್ಲಿ 16 ವಯೋಮಾನದ ವಿಭಾಗದಲ್ಲಿ ಹರ್ಡಲ್ಸ್‌ನಲ್ಲಿ ರಾಜ್ಯ ದಾಖಲೆಯೊಂದಿಗೆ ಚಿನ್ನದ ಪದಕ ಗಳಿಸಿದ್ದರು. ಮೈಸೂರಿನಲ್ಲಿ ನಡೆದಿದ್ದ ರಾಜ್ಯಮಟ್ಟದ ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ರೀಡಾಕೂಟದಲ್ಲಿ 110ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ ಗಳಿಸಿದ್ದ ಅವರು 2022-23ರ ಕರ್ನಾಟಕ ಜೂನಿಯರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 18 ವರ್ಷ ವಯೋಮಿತಿಯಲ್ಲಿ ಬೆಳ್ಳಿಯ ಪದಕ ಗಳಿಸಿದ್ದರು. ಇವರಿಗೆ ಶಾಂತರಾಮ್ ರವರು ತರಬೇತಿ ನೀಡುತ್ತಿದ್ದಾರೆ.

Related posts

ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಧರ್ಮಸ್ಥಳ ಹಾಗೂ ಶಾಂತಿವನ ಭೇಟಿ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್, ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್, ರೂ10 ಸಾವಿರಕ್ಕಿಂತ ಹೆಚ್ಚಿನ ಖರೀದಿಗೆ ಶೇ 20 ರಿಯಾಯಿತಿ ಹಾಗೂ ವಿಶೇಷ ಉಡುಗೊರೆ

Suddi Udaya

ನೆರಿಯದಲ್ಲಿ ಹಿಂದೂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ: ಮೃತದೇಹವನ್ನು ಪಂಚಾಯತ್ ಎದುರಿನಲ್ಲಿಟ್ಟು ಪ್ರತಿಭಟನೆಗೆ ಸಿದ್ದತೆ: ಸ್ಥಳಕ್ಕೆ ತಹಶೀಲ್ದಾರರು ಬರಬೇಕು,ಇಂದೇ ಹಿಂದೂ ರುದ್ರಭೂಮಿಗೆ ಸ್ಥಳ ಮಂಜೂರುಗೊಳಿಸಬೇಕೆಂದು ಒತ್ತಾಯ

Suddi Udaya

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya

ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ

Suddi Udaya
error: Content is protected !!