22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಾಧಕರು

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

ಉಜಿರೆ: ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ ಸಂಭ್ರಮ-2024 ಒಷಿಯನ್ ಪರ್ಲ್ ಹೋಟೇಲ್ ನ ಸಭಾಂಗಣದಲ್ಲಿ ಸೆ.19 ರಂದು ನಡೆಯಿತು.

ವಿಧಾನ ಪರಿಷತ್ ಶಾಸಕ ಕೆ.ಪ್ರತಾಪಸಿಂಹ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಜಗತ್ತಿನ ಮುಂದೆ ಭಾರತ ಬಹಳ ದೊಡ್ಡ ದೇಶವಾಗಿ ಬೆಳೆಯುತ್ತಿದೆ.ಭಾರತದ ಸಾಧನೆ,ಬೆಳವಣಿಗೆ,ಪ್ರಗತಿಯ ಹಿಂದೆ ಇಂಜಿನಿಯರ್ಸ್ ಗಳ ಕೊಡುಗೆ ಅಪಾರ ಎಂದು ಹೇಳಿದರು.

ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ ಪಡೆದ ಸಂಪತ್ ರತ್ನ ರಾವ್,ಸುಭಾಶ್ಚಂದ್ರ, ಚೆಯರ್ ಮೆನ್ ಜಗದೀಶ್ ಪ್ರಸಾದ್ ಹಾಗೂ ಹಲವಾರು ಇಂಜಿನಿಯರ್ಸ್ ಸಾಧಕರನ್ನು, ಸಹಕಾರ ನೀಡಿದ ಮಹನೀಯರನ್ನು ಗೌರವಿಸಲಾಯಿತು.

ಕೆಪಿಸಿಇಎ ಇದರ ಅಧ್ಯಕ್ಷ ಶ್ರೀಕಾಂತ್ ಎಸ್, ಕಾರ್ಯದರ್ಶಿ ಅಜಿತ್ ಕುಮಾರ್ ಎಸ್.ಎಂ,ಸ್ಥಾಪಕ ಸದಸ್ಯ ಎಂ.ಆರ್ ಕಲ್ಗಲ್,ಡಾ.ಅಶ್ವಥ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ ಇದರ ಅಧ್ಯಕ್ಷ ಜಗದೀಶ್ ಪ್ರಸಾದ್ ಎನ್ ಎಲ್ಲರನ್ನು ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್,ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಅಶೋಕ್ ಕುಮಾರ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.ಕಾರ್ಯದರ್ಶಿ ಚೇತನ್ ಎಸ್,ಕೋಶಾಧಿಕಾರಿ ಕೇಶವ ಹಾಗೂ ನಾಗೇಶ್ ಎಂ,ಪ್ರಮೋದ್,ಸಿಜೋ ಜೋಸೆಫ್, ನಿತಿನ್ ಬಿ ಹಾಗೂ ಸದಸ್ಯರು ಸಹಕರಿಸಿದರು.ಚೈತ್ರಾ ಭಾರಧ್ವಾಜ್ ಪ್ರಾರ್ಥನೆ ಹಾಡಿದರು.

Related posts

‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ರಂಗಮಂದಿರ ನಿರ್ಮಾಣಕ್ಕೆ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ, ಉದ್ಯಮಿ ಶಶಿಧರ ಶೆಟ್ಟಿಯವರಿಂದ ರೂ 5 ಲಕ್ಷ ಸಹಾಯಧನ

Suddi Udaya

ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

Suddi Udaya

ಸೋಮಂತಡ್ಕ ಬಳಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಯುವ ಪೋಟೋಗ್ರಾಫರ್ ಗಣೇಶ್ ಗೌಡ ಕಳೆಂಜ ಸಾವು

Suddi Udaya

ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದಿಂದ ಪರಿಸರ ದಿನಾಚರಣೆ

Suddi Udaya
error: Content is protected !!