25.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಗಾಂಧಿನಗರದಲ್ಲಿ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವದ ಪ್ರಯುಕ್ತ ಕ್ರೀಡಾಕೂಟ

ಉಜಿರೆ: ಮೈತ್ರಿ ಫ್ರೆಂಡ್ಸ್ ಕ್ಲಬ್ ಗಾಂಧಿನಗರ ಹಾಗೂ ಮೈತ್ರಿ ಮಹಿಳಾ ಮಂಡಳಿ ಗಾಂಧಿನಗರ ಇವರ ಜಂಟಿ ಆಶ್ರಯದಲ್ಲಿ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವದ ಪ್ರಯುಕ್ತ ಕ್ರೀಡಾ ಕೂಟವು ಸೆ.15ರಂದು ಗಾಂಧಿನಗರ ವಠಾರದಲ್ಲಿ ನಡೆಯಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಅರವಿಂದ್ ಕಾರಂತ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಉಜಿರೆ, ಜಿಲ್ಲಾ ಕೆಡಿಪಿ ಸದಸ್ಯರು ಹಾಗೂ ನೋಟರಿ ವಕೀಲರಾದ ಸಂತೋಷ್ ಕುಮಾರ್, ಉಜಿರೆ ಗ್ರಾ.ಪಂ. ಮಾಜಿ ಉಪಾಧ್ಯಕ್ಷರು ಹಾಗೂ ತಾಲೂಕು ಅಕ್ರಮ-ಸಕ್ರಮ ಸಮಿತಿಯ ಸದಸ್ಯೆ ವಿನುತಾ ರಜತ್ ಗೌಡ, ಶಾರೀರಿಕ ಶಿಕ್ಷಕ ಸಂಜೀವ, ಮೂಡುಬಿದಿರೆ ಎಕ್ಸೆಲೆಂಟ್ ಕಾಲೇಜಿನ ಉಪನ್ಯಾಸಕ ಚಂದ್ರಪ್ಪ ಮದ್ದಡ್ಕ, ಗ್ರಾ.ಪಂ.ಸದಸ್ಯ ದಿನೇಶ್‌ ಆಗಮಿಸಿದ್ದರು.

ಮೈತ್ರಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷ ರಮೇಶ್, ಗೌರವಾಧ್ಯಕ್ಷ ಕೆ. ಶ್ರೀನಿವಾಸ ಗಾಂಧಿನಗರ ಮತ್ತು ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸೇನೆಯಿಂದ ನಿವೃತ್ತರಾಗಿ ಆಗಮಿಸಿದ ಸುಬೇದಾರ್ ಮೆಲ್ವಿನ್ ಫೆರ್ನಾಂಡಿಸ್, ಗ್ರಾ.ಪಂ. ನ ಹಿರಿಯ ಸಿಬ್ಬಂದಿ ಓಡಿ, ಅರಣ್ಯ ಇಲಾಖೆಯಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದ ಕಮಲ, ಹಾಗೂ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು.

Related posts

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

Suddi Udaya

ಸೆ.7: ಪ್ರವಾದಿ ಮುಹಮ್ಮದ್ ಸೀರತ್ ಅಭಿಯಾನದ ಪ್ರಯುಕ್ತ ಧಾರ್ಮಿಕ ಸೌಹಾರ್ದ ಕಾರ್ಯಕ್ರಮ: ಸವಾಲುಗಳು ಮತ್ತು ಅವಕಾಶಗಳು ಎಂಬ ವಿಷಯದಡಿ ಸಾರ್ವಜನಿಕ ಸಮಾವೇಶ

Suddi Udaya

ಬೆಳಗಾವಿ ಅಧಿವೇಶನದ ನಡುವೆ ಕೆಸಿಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿದ ಶಾಸಕರುಗಳು: ಗಮನ ಸೆಳೆದ ಶಾಸಕ ಹರೀಶ್ ಪೂಂಜರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ

Suddi Udaya

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!