23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

ಧರ್ಮಸ್ಥಳ :ಇಲ್ಲಿಯ ಅಶೋಕನಗರದ ಹಿರಿಯ ಜೀವ
ನಾಟಿ ವೈದ್ಯರೆಂದೇ ಪ್ರಸಿದ್ಧರಾದ,ಐದನೇಯ ತಲೆಮಾರಾದ ಶತಾಯುಷಿ 110 ವರ್ಷ ವಯಸ್ಸಿನ ಶ್ರೀಮತಿ ನೊಕ್ಕೆ ಅಜ್ಜಿ ರವರು ವಯೋಸಹಜವಾಗಿ ಸೆ. 19ರಂದು ಸಂಜೆ ದೈವಾಧೀನರಾದರು.

ಮೃತರು ಮಕ್ಕಳು, ಮೊಮ್ಮಕ್ಕಳು,ಮರಿಮೊಮ್ಮಕ್ಕಳು ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.

ಅವರು ತಮ್ಮ ಜೀವಿತಾವಧಿಯಲ್ಲಿ ಸುಮಾರು 700 ಕ್ಕೂ ಅಧಿಕ ಹೆರಿಗೆಗಳನ್ನು ಸುಸೂತ್ರವಾಗಿ ನೆರವೇರಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಅಲ್ಲದೆ ಸುತ್ತಮುತ್ತಲ ಪರಿಸರದವರಿಗೆ ಸಣ್ಣಪುಟ್ಟ ಖಾಯಿಲೆಗಳಿಗೆ ನಾಟಿ ಮದ್ದು ಕೊಟ್ಟು ವಾಸಿ ಮಾಡುತಿದ್ದರು.

ತಲೆನೋವಿನ ಮದ್ದಿಗಾಗಿ ಪರವೂರಿನ ಜನರು ಕೂಡ ಇವರನ್ನು ಅರಸಿಕೊಂಡು ಬರುತ್ತಿದ್ದರು.ತಮಗೆ ವಿದ್ಯಾಭ್ಯಾಸ ಇಲ್ಲದಿದ್ದರೂ ಕೂಡ ಯಾವುದೇ ವೈದ್ಯರಿಗೆ ಕಡಿಮೆ ಇಲ್ಲದಂತೆ ಓರ್ವ ಪ್ರಸೂತಿ ತಜ್ಞೆಯಾಗಿ, ನಾಟಿ ವೈದ್ಯೆಯಾಗಿ ಊರಿನಲ್ಲಿ ಪ್ರಸಿದ್ಧಿಯನ್ನು ಪಡೆದಿದ್ದರು. ಅಲ್ಲದೆ ತುಳು ಸಂಧಿ – ಪಾಡ್ದನ ಹಾಡುವುದರಲ್ಲೂ ಇವರು ನಿಸ್ಸೀಮರಾಗಿದ್ದರು.
ಇವರು ಈ ಸಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದರು.

Related posts

ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ನಿಕಟಪೂರ್ವ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್ ಆಯ್ಕೆ

Suddi Udaya

ವಾಲಿಬಾಲ್ ಪಂದ್ಯಾಟ; ರಕ್ಷಿತಾ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya

ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಜು.21 ರಿಂದ ಚಾತುರ್ಮಾಸ್ಯ ಆರಂಭ

Suddi Udaya
error: Content is protected !!