July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

ಧರ್ಮಸ್ಥಳ :ಇಲ್ಲಿಯ ಅಶೋಕನಗರದ ಹಿರಿಯ ಜೀವ
ನಾಟಿ ವೈದ್ಯರೆಂದೇ ಪ್ರಸಿದ್ಧರಾದ,ಐದನೇಯ ತಲೆಮಾರಾದ ಶತಾಯುಷಿ 110 ವರ್ಷ ವಯಸ್ಸಿನ ಶ್ರೀಮತಿ ನೊಕ್ಕೆ ಅಜ್ಜಿ ರವರು ವಯೋಸಹಜವಾಗಿ ಸೆ. 19ರಂದು ಸಂಜೆ ದೈವಾಧೀನರಾದರು.

ಮೃತರು ಮಕ್ಕಳು, ಮೊಮ್ಮಕ್ಕಳು,ಮರಿಮೊಮ್ಮಕ್ಕಳು ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.

ಅವರು ತಮ್ಮ ಜೀವಿತಾವಧಿಯಲ್ಲಿ ಸುಮಾರು 700 ಕ್ಕೂ ಅಧಿಕ ಹೆರಿಗೆಗಳನ್ನು ಸುಸೂತ್ರವಾಗಿ ನೆರವೇರಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಅಲ್ಲದೆ ಸುತ್ತಮುತ್ತಲ ಪರಿಸರದವರಿಗೆ ಸಣ್ಣಪುಟ್ಟ ಖಾಯಿಲೆಗಳಿಗೆ ನಾಟಿ ಮದ್ದು ಕೊಟ್ಟು ವಾಸಿ ಮಾಡುತಿದ್ದರು.

ತಲೆನೋವಿನ ಮದ್ದಿಗಾಗಿ ಪರವೂರಿನ ಜನರು ಕೂಡ ಇವರನ್ನು ಅರಸಿಕೊಂಡು ಬರುತ್ತಿದ್ದರು.ತಮಗೆ ವಿದ್ಯಾಭ್ಯಾಸ ಇಲ್ಲದಿದ್ದರೂ ಕೂಡ ಯಾವುದೇ ವೈದ್ಯರಿಗೆ ಕಡಿಮೆ ಇಲ್ಲದಂತೆ ಓರ್ವ ಪ್ರಸೂತಿ ತಜ್ಞೆಯಾಗಿ, ನಾಟಿ ವೈದ್ಯೆಯಾಗಿ ಊರಿನಲ್ಲಿ ಪ್ರಸಿದ್ಧಿಯನ್ನು ಪಡೆದಿದ್ದರು. ಅಲ್ಲದೆ ತುಳು ಸಂಧಿ – ಪಾಡ್ದನ ಹಾಡುವುದರಲ್ಲೂ ಇವರು ನಿಸ್ಸೀಮರಾಗಿದ್ದರು.
ಇವರು ಈ ಸಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದರು.

Related posts

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya

ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ ಉದ್ಘಾಟನೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಮತ್ತು ಕಾಲೇಜಿನಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
error: Content is protected !!