September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

ಧರ್ಮಸ್ಥಳ :ಇಲ್ಲಿಯ ಅಶೋಕನಗರದ ಹಿರಿಯ ಜೀವ
ನಾಟಿ ವೈದ್ಯರೆಂದೇ ಪ್ರಸಿದ್ಧರಾದ,ಐದನೇಯ ತಲೆಮಾರಾದ ಶತಾಯುಷಿ 110 ವರ್ಷ ವಯಸ್ಸಿನ ಶ್ರೀಮತಿ ನೊಕ್ಕೆ ಅಜ್ಜಿ ರವರು ವಯೋಸಹಜವಾಗಿ ಸೆ. 19ರಂದು ಸಂಜೆ ದೈವಾಧೀನರಾದರು.

ಮೃತರು ಮಕ್ಕಳು, ಮೊಮ್ಮಕ್ಕಳು,ಮರಿಮೊಮ್ಮಕ್ಕಳು ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.

ಅವರು ತಮ್ಮ ಜೀವಿತಾವಧಿಯಲ್ಲಿ ಸುಮಾರು 700 ಕ್ಕೂ ಅಧಿಕ ಹೆರಿಗೆಗಳನ್ನು ಸುಸೂತ್ರವಾಗಿ ನೆರವೇರಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಅಲ್ಲದೆ ಸುತ್ತಮುತ್ತಲ ಪರಿಸರದವರಿಗೆ ಸಣ್ಣಪುಟ್ಟ ಖಾಯಿಲೆಗಳಿಗೆ ನಾಟಿ ಮದ್ದು ಕೊಟ್ಟು ವಾಸಿ ಮಾಡುತಿದ್ದರು.

ತಲೆನೋವಿನ ಮದ್ದಿಗಾಗಿ ಪರವೂರಿನ ಜನರು ಕೂಡ ಇವರನ್ನು ಅರಸಿಕೊಂಡು ಬರುತ್ತಿದ್ದರು.ತಮಗೆ ವಿದ್ಯಾಭ್ಯಾಸ ಇಲ್ಲದಿದ್ದರೂ ಕೂಡ ಯಾವುದೇ ವೈದ್ಯರಿಗೆ ಕಡಿಮೆ ಇಲ್ಲದಂತೆ ಓರ್ವ ಪ್ರಸೂತಿ ತಜ್ಞೆಯಾಗಿ, ನಾಟಿ ವೈದ್ಯೆಯಾಗಿ ಊರಿನಲ್ಲಿ ಪ್ರಸಿದ್ಧಿಯನ್ನು ಪಡೆದಿದ್ದರು. ಅಲ್ಲದೆ ತುಳು ಸಂಧಿ – ಪಾಡ್ದನ ಹಾಡುವುದರಲ್ಲೂ ಇವರು ನಿಸ್ಸೀಮರಾಗಿದ್ದರು.
ಇವರು ಈ ಸಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದರು.

Related posts

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ: ರಂಗ ಮಂಟಪ ಲೋಕಾರ್ಪಣೆ, ನವದುರ್ಗೆಯರ ಮೂರ್ತಿ ಪ್ರತಿಷ್ಠೆ, ದೇವರ ಪ್ರಭಾವಳಿ ಸಮರ್ಪಣೆ: ಇಂದು (ಫೆ.5) ನವ ಗುಳಿಗಗಳ ವಿಶೇಷ ಗಗ್ಗರ ಸೇವೆ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಮೂಡಾಯಿಬೆಟ್ಟು ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಖರೀದಿಯ ಮೇಲೆ ಶೇ.20 ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ವಿಕಲಚೇತನರ ಇಲಾಖೆ ರಾಜ್ಯ ಆಯುಕ್ತೆ ಲತಾ ಕುಮಾರಿ (ಐ.ಎ.ಎಸ್) ಧರ್ಮಸ್ಥಳ ಭೇಟಿ

Suddi Udaya

ಬೆಳ್ತಂಗಡಿ: ವರ್ಗಾವಣೆಗೊಂಡ ಕುಸುಮಾಧರ ಬಿ ರವರಿಗೆ ತಾಲೂಕು ಪಂಚಾಯತ್ ಹಾಗೂ ವಿವಿಧ ಇಲಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!