September 6, 2026
ಶಿಕ್ಷಣ ಸಂಸ್ಥೆ

ದ್ವಿತೀಯ ಪಿಯು ವಿಜ್ಞಾನವಿದ್ಯಾರ್ಥಿಗಳಿಗೆ ಗುರುವಾಯನಕೆರೆಯ ವಿದ್ವತ್ ಪಿ . ಯು ಕಾಲೇಜಿನಲ್ಲಿ ಪರೀಕ್ಷಾ ಕಾಯಾ೯ಗಾರ

ಬೆಳ್ತಂಗಡಿ ಹಾಗೂ ಸುತ್ತಮುತ್ತಲಿನ ತಾಲೂಕುಗಳ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೊಂದು ಸುವರ್ಣಾವಕಾಶ.
ದ್ವಿತೀಯ ಪಿಯು ವಿದ್ಯಾರ್ಥಿಗಳಿಗಿರುವ ಅವಕಾಶಗಳು, ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ, ಪರೀಕ್ಷೆಗಳಿಗೆ ತಯಾರಾಗುವ ಬಗೆ, ವೈಜ್ಞಾನಿಕ ಸ್ಟಡಿ ಮಾದರಿ ಹಾಗೂ ನೆನಪಿನ ಶಕ್ತಿ ವೃದ್ಧಿಯ ಬಗ್ಗೆ ವಿಸ್ತುತ ಮಾಹಿತಿಯ ಓರಿಯಂಟೇಷನ್ ಕಾರ್ಯಕ್ರಮ ಇದೇ ಸಪ್ಟೆಂಬರ್ 22 ರ ಭಾನುವಾರ ಬೆಳಿಗ್ಗೆ 11:30 ಕ್ಕೆ ಗುರುವಾಯನಕೆರೆಯ ವಿದ್ವತ್ ಪಿ ಯು ಕಾಲೇಜಿನಲ್ಲಿ ನಡೆಯಲಿದೆ.

ಈ ಓರಿಯಂಟೇಷನ್ ನಲ್ಲಿ ನೀಟ್, ಜೆಇಇ, ಸಿಯುಇಟಿ (CUET), ಐಸಿಎಆರ್ (ICAR) ಸಿಯಿಟಿ (CET), ಹೋಟೆಲ್ ಮ್ಯಾನೆಜೈಂಟ್, ಪ್ಯಾರಾ- ಮೆಡಿಕಲ್, ಎನ್‌ಡಿಎ(NDA), ಹೀಗೆ ಹತ್ತು ಹಲವು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗುವುದು, ಅದು ಅಲ್ಲದೆ ಈ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಹಾಗೂ ವಿದ್ಯಾರ್ಥಿ ವೇತನಗಳ ಬಗ್ಗೆಯೂ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುವುದು.

ದ್ವಿತಿಯ ಪಿಯು ವಿಜ್ಞಾನ ವಿದ್ಯಾರ್ಥಿಗಳು ವೈಜ್ಞಾನಿಕ ಸ್ಟಡಿ ಮಾದರಿ ಹಾಗೂ ನಿಖರ ಫಲಿತಾಂಶಕ್ಕಾಗಿ ನೆನಪಿನ ಶಕ್ತಿಯ ವೃದ್ಧಿ ಹೇಗೆ ಮಾಡಿಕೊಳ್ಳಬೇಕೆಂಬ ಬಗ್ಗೆ ಹೆಸರಾಂತ ಆಪ್ತ ಸಮಾಲೋಚನ ತಜ್ಞ ಗಂಗಾಧರ ಇ ಮಂಡಗಳಲೆ ಯವರು ತರಬೇತಿ ನೀಡಲಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳ ಹೆಸರಾಂತ ತರಬೇತಿದಾರರು ಹಾಗೂ ವಿಷಯ ತಜ್ಞರಾದ ಪ್ರತಾಪ್‌ ದೊಡ್ಡಮನೆ ಯವರು ಮಾಹಿತಿ ನಿಡಲಿದ್ದಾರೆ. ಈ ಕಾರ್ಯಾಗಾರ ಸಂಪೂರ್ಣ ಉಚಿತವಾಗಿದ್ದು ಬೆಳ್ತಂಗಡಿ, ಬಂಟ್ವಾಳ, ಪುತ್ತೂರು ತಾಲೂಕುಗಳ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿ ಹಾಗೂ ಅವರ ಪೋಷಕರು ಇದರಲ್ಲಿ ಭಾಗಿಯಾಗಿ ಇದರ ಸಂಪೂರ್ಣ ಪ್ರಯೋಜನ ಪಡೆಯಬಹುದು ಎಂದು ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಕಾಶಿನಾಥ್ ಎಂ.ಕೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರಿಗೆ ಸಂಪರ್ಕಿಸಿ
– M . 7618718791, 7618718792

Related posts

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿ.ಯು ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ–2 ಫಲಿತಾಂಶ: ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಯಾನ ಪೊನ್ನಮ್ಮ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

Suddi Udaya

ಪಿಯುಸಿ ಫಲಿತಾಂಶ: ಶ್ರೀದೇವಿ ಕಲಾ ವಿಭಾಗದಲ್ಲಿ ವಾಣಿ ಕಾಲೇಜಿಗೆ ಪ್ರಥಮ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya
error: Content is protected !!