ಕನ್ಯಾಡಿ ಸರ್ಕಾರಿ ಶಾಲೆಗೆ ರೂ. 1.65 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

Suddi Udaya

ಕನ್ಯಾಡಿ: ಹಿಂದೂ ಧಾರ್ಮಿಕ ಸೇವಾ ಸಮಿತಿ ಆಶ್ರಯದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಬೆಂಗಳೂರಿನ ಬಿಟ್ಸ್ & ಬೈಟ್ ಐಟಿ ಕಂಪನಿಯ ಪ್ರಕಾಶ್ ರಾವ್ ಇವರು ನೀಡಿದ ರೂ.1.65 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ ಅನ್ನು ಶ್ರೀ ರಾಮಕ್ಷೇತ್ರ ದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಕನ್ಯಾಡಿಯ ಸರ್ಕಾರಿ ಶಾಲೆಗೆ ಹಸ್ತಾಂತರ ಮಾಡಿ ಸ್ಮಾರ್ಟ್ ಕ್ಲಾಸ್ ನ ಸದುಪಯೋಗವನ್ನು ಚೆನ್ನಾಗಿ ಪಡೆದು ಸರ್ಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳ ಭವಿಷ್ಯ ಉಜ್ವಲವಾಗಿ ಬೆಳಗಲಿ ಎಂದು ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಅಧ್ಯಕ್ಷ ಪೂರಣ್ ವರ್ಮಾ, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಅವಿನಾಶ್ ಶೆಟ್ಟಿ, ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷ ರಾಜೇಶ್ ರಾವ್, ಇಸ್ರೋ ಹಿರಿಯ ವಿಜ್ಞಾನಿ ವಾಸುದೇವ್ ರಾವ್ ಪಿ, ಅಗ್ರಿಲೀಫ್ ಸಂಸ್ಥೆಯ ನಿರ್ದೇಶಕ ಅವಿನಾಶ್ ರಾವ್, ಬ್ಯಾಂಕ್ ಆಫ್ ಬರೋಡ ನೂಜಿಬಾಳ್ತಿಲ ಶಾಖಾ ವ್ಯವಸ್ಥಾಪಕ ಶಿವಪ್ರಸಾದ್ ಸುರ್ಯ,
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ನಂದ ಭಟ್ ಕೆ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪುಷ್ಪಾ ಎನ್. ಹಾಗೂ ಶಾಲಾ ಅಧ್ಯಾಪಕ ವೃಂದ ಮತ್ತು ಶಾಲೆಯ ಹಿರಿಯ ವಿದ್ಯಾರ್ಥಿಗಳು, ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Comment

error: Content is protected !!