ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ವಾರ್ಷಿಕ ಮಹಾಸಭೆಯು ಸೆ.20ರಂದು ಸಂಘದ ಅಧ್ಯಕ್ಷರಾದ ಲಿಂಗಪ್ಪ ನಾಯ್ಕ ಉರುವಾಲು ಇವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತಿ ವಾರ್ಷಿಕ ಲೆಕ್ಕಪತ್ರಗಳನ್ನು ಮಂಡಿಸಿದರು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ಕೃಷಿ ಕೇತ್ರದಲ್ಲಿ ವಿಶೇಷ ಸಾಧನೆಗೈದ ಕೇಶವ ಎಂ ಕೆ ಕರ್ಮಯೋಗಿ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಉಪಾಧ್ಯಕ್ಷ ಸಂತೋಷ್ ನಾಯ್ಕ, ನಿರ್ದೇಶಕರುಗಳಾದ, ಪ್ರಸಾದ್ ನಾಯ್ಕ, ಪ್ರಶಾಂತ ನಾಯ್ಕ, ತಾರನಾಥ, ಲೀಲಾವತಿ, ಸವಿತಾ ಹಾಗೂ ಸಂಘದ ಸಿಬ್ಬಂದಿ ವರ್ಗ, ಪಿಗ್ಗಿ ಸಂಗ್ರಹಗಾರರು ಹಾಗೂ ಸಂಘದ ಸದಸ್ಯರು ಹಾಜರಿದ್ದರು.

ನಿರ್ದೇಶಕ ಸೀತಾರಾಮ್ ಬಿ. ಎಸ್. ಬೆಳಾಲು ಸ್ವಾಗತಿಸಿ, ಚಿದಾನಂದ ಕಾರ್ಯಕ್ರಮ ನಿರೂಪಿಸಿ ನಿರ್ದೇಶಕ ಚೆನ್ನಕೇಶವ ಧನ್ಯವಾದವಿತ್ತರು.

Leave a Comment

error: Content is protected !!