ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya

ಕಲ್ಮಂಜ: ರೋಟರಿ ಕ್ಲಬ್ ಇಂದಿರಾನಗರ ಬೆಂಗಳೂರು ಇಲ್ಲಿನ ರೊ. ಶ್ರೀಮತಿ ಸೌಮ್ಯ ಶ್ರೀಕಾಂತ್ ರವರು ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಹದಿಹರೆಯದಲ್ಲಿ ಆಗುವ ದೈಹಿಕ ಮತ್ತು ಮಾನಸಿಕ ಬದಲಾವಣೆ ಹಾಗೂ ಆ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಶುಚಿತ್ವ ಇತ್ಯಾದಿಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಆನ್ಸ್ ಕ್ಲಬ್ ಅಧ್ಯಕ್ಷೆ ಗಾಯತ್ರಿ ಶ್ರೀಧರ್, ಕಾರ್ಯದರ್ಶಿ ಡಾ| ವಿನಯ ಕಿಶೋರ್, ನವೀನಾ ಜಯಕುಮಾರ್ ಶೆಟ್ಟಿ, ಭಾಗವಹಿಸಿದ್ದರು.

ಮುಖ್ಯ ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿ, ಸಾವಿತ್ರಿ ಸಿ.ಡಿ. ಧನ್ಯವಾದವಿತ್ತರು ಶಿಕ್ಷಕ್ಷಿಯರಾದ ಮಾಲಿನಿ ಹೆಗಡೆ, ಸವಿತಾ, ಹೇಮಲತಾ, ಪ್ರೇಮಲತಾ, ಪ್ರೇಮಾ ಹೆಚ್.ವಿ., ಸುಧೀಂದ್ರ ರವರು ಸಹಕರಿಸಿದರು.

Leave a Comment

error: Content is protected !!