ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ ಮದ್ದಡ್ಕ ಸುವರ್ಣ ಸೌಧ ಸಭಾಭವನದಲ್ಲಿ ಸೆ.19ರಂದು ಸಂಘದ ಅಧ್ಯಕ್ಷ ಕೆ. ಗೋಪಾಲ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಘದಲ್ಲಿ ರೂ. 3.90ಕೋಟಿ ವ್ಯವಹಾರಗಳ ಗಳಿಸಿದ್ದು ರೂ. 15.30ಲಕ್ಷ ಲಾಭ ಗಳಿಸಿ ಸದಸ್ಯರಿಗೆ ಶೇ.65 ಬೋನಸ್, ಶೇ.25 ಡಿವಿಡೆಂಡ್ ಘೋಷಿಸಿದರು.

ಸಭೆಯಲ್ಲಿ ನಿರ್ದೇಶಕರಾದ ಅಣಿ ಶೆಟ್ಟಿ, ಕೆ.ಪಿ. ಚಿದಾನಂದ, ವಿನೋದ ಶೆಟ್ಟಿ, ಮೋಹನ್ ನಾಯ್ಕ, ಶಿವಪ್ಪ ಗೌಡ, ಶಶಿಕಲಾ, ಕಾಂತಪ್ಪ ಮೂಲ್ಯ, ರುದೇಶ್ ಕುಮಾರ್, ನಾರಾಯಣ ಮೂಲ್ಯ, ವಸಂತಿ, ಉಪಸ್ಥಿರಿದ್ದರು.

ಸಂಘದ ಸದಸ್ಯರ ಮಕ್ಕಳಾದ 8 ಮಂದಿ ಎಸ್‌ಎಸ್‌ಎಲ್‌ಸಿ ಹಾಗೂ 11 ಮಂದಿ ಪಿ.ಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು. ಉಪಾಧ್ಯಕ್ಷ ವಿವೇಕಾನಂದ ಸಾಲಿಯನ್ ಸ್ವಾಗತಿಸಿ, ಕಾರ್ಯದರ್ಶಿ ಪವಿತ್ರ ವರದಿ ಹಾಗೂ ಲೆಕ್ಕಪತ್ರ ಮಂಡಿಸಿ, ನಿರ್ದೇಶಕ ರಮೇಶ್ ಪೂಜಾರಿ ಧನ್ಯವಾದವಿತ್ತರು.

Leave a Comment

error: Content is protected !!