23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ ಮದ್ದಡ್ಕ ಸುವರ್ಣ ಸೌಧ ಸಭಾಭವನದಲ್ಲಿ ಸೆ.19ರಂದು ಸಂಘದ ಅಧ್ಯಕ್ಷ ಕೆ. ಗೋಪಾಲ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಘದಲ್ಲಿ ರೂ. 3.90ಕೋಟಿ ವ್ಯವಹಾರಗಳ ಗಳಿಸಿದ್ದು ರೂ. 15.30ಲಕ್ಷ ಲಾಭ ಗಳಿಸಿ ಸದಸ್ಯರಿಗೆ ಶೇ.65 ಬೋನಸ್, ಶೇ.25 ಡಿವಿಡೆಂಡ್ ಘೋಷಿಸಿದರು.

ಸಭೆಯಲ್ಲಿ ನಿರ್ದೇಶಕರಾದ ಅಣಿ ಶೆಟ್ಟಿ, ಕೆ.ಪಿ. ಚಿದಾನಂದ, ವಿನೋದ ಶೆಟ್ಟಿ, ಮೋಹನ್ ನಾಯ್ಕ, ಶಿವಪ್ಪ ಗೌಡ, ಶಶಿಕಲಾ, ಕಾಂತಪ್ಪ ಮೂಲ್ಯ, ರುದೇಶ್ ಕುಮಾರ್, ನಾರಾಯಣ ಮೂಲ್ಯ, ವಸಂತಿ, ಉಪಸ್ಥಿರಿದ್ದರು.

ಸಂಘದ ಸದಸ್ಯರ ಮಕ್ಕಳಾದ 8 ಮಂದಿ ಎಸ್‌ಎಸ್‌ಎಲ್‌ಸಿ ಹಾಗೂ 11 ಮಂದಿ ಪಿ.ಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು. ಉಪಾಧ್ಯಕ್ಷ ವಿವೇಕಾನಂದ ಸಾಲಿಯನ್ ಸ್ವಾಗತಿಸಿ, ಕಾರ್ಯದರ್ಶಿ ಪವಿತ್ರ ವರದಿ ಹಾಗೂ ಲೆಕ್ಕಪತ್ರ ಮಂಡಿಸಿ, ನಿರ್ದೇಶಕ ರಮೇಶ್ ಪೂಜಾರಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ವರ್ಗಾವಣೆ

Suddi Udaya

ಎಸ್‌ಡಿಎಂ ಕಾಲೇಜು: ‘ಬರೋಡಾ ಅಚೀವರ್ಸ್ ಅವಾರ್ಡ್-2026’

Suddi Udaya

ಗೇರುಕಟ್ಟೆಯಲ್ಲಿ ಹೊಟೇಲ್ ‘ಶುಭೋದಯ’ ಶುಭಾರಂಭ

Suddi Udaya

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ: 9 ನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

Suddi Udaya
error: Content is protected !!