September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

ಬೆಳಾಲು : ಬೆಳಾಲು ಶ್ರೀ.ಧ. ಮ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ ಸೆ.19ರಂದು ನಡೆಯಿತು .

ಸಭೆಯಲ್ಲಿ ವಿದ್ಯಾರ್ಥಿಗಳ ಶಿಸ್ತು, ಗೈರು ಹಾಜರಾತಿ, ಮೊಬೈಲ್ ಬಳಕೆಯ ನಿಯಂತ್ರಣ, ಮಾದಕ ವ್ಯಸನದ ಬಗೆಗಿನ ಜಾಗೃತಿ, ದ್ವಿ ಚಕ್ರ ವಾಹನಗಳ ಬಳಕೆಯ ಬಗೆಗಿನ ಎಚ್ಚರಿಕೆ, ಅನಗತ್ಯ ಆಹಾರದ ಸೇವನೆ (ಜಂಕ್ ಫುಡ್) ಮುಂತಾದ ವಿಷಯಗಳ ಬಗ್ಗೆ ಜಾಗೃತಿಯ ಮಾತುಗಳನ್ನು ಹಾಗೂ ಶಾಲೆಯ ಪಾಠ ಪ್ರವಚನ, ಶೈಕ್ಷಣಿಕ ಸಾಹಿತ್ಯ -ಸಾಧನ ಕಾರ್ಯಕ್ರಮಗಳ ಬಗೆಗೆ, ಕ್ರೀಡಾ ಸಾಧನೆಗಳ ಬಗೆಗೆ ಮಾಹಿತಿಯನ್ನು ನೀಡಿ, ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಆಡಳಿತ ಮಂಡಳಿ ನೀಡಿದ ನಿರ್ದೇಶನ, ಸಹಕಾರ- ಸಹಾಯಗಳನ್ನು ತಿಳಿಸಿ, ವಿದ್ಯಾರ್ಥಿಗಳ ಪ್ರಗತಿಯಲ್ಲಿ ಪೋಷಕರ ಪಾತ್ರದ ಬಗ್ಗೆ ಮುಖ್ಯ ಶಿಕ್ಷಕ ಜಯರಾಮ ಮಯ್ಯ ಮಾಹಿತಿಯನ್ನು ನೀಡಿದರು.

ಅಧ್ಯಾಪಕ ವೃಂದದವರು ಸಹಕರಿಸಿದರು. ಹೆಚ್ಚಿನ ಸಂಖ್ಯೆಯ ಪೋಷಕರು ಸಭೆಯಲ್ಲಿ ಭಾಗವಹಿಸಿ, ಬಳಿಕ ವಿದ್ಯಾರ್ಥಿಗಳ ಪ್ರಗತಿಯನ್ನು ವೈಯಕ್ತಿಕವಾಗಿ ಶಿಕ್ಷಕರೊಂದಿಗೆ ವಿಶ್ಲೇಷಿಸಿದರು.

Related posts

ವೇಣೂರು ಗ್ರಾಮ ಪಂಚಾಯತ್ ನ ಮೊದಲ ಹಂತದ ಗ್ರಾಮಸಭೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಶುದ್ಧೀಕರಣಕ್ಕೆ ಹೊಸ ಎಥಿಲೀನ್ ಆಕ್ಸೈಡ್ ಯಂತ್ರ ಅಳವಡಿಕೆ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya
error: Content is protected !!