July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

ಬೆಳಾಲು : ಬೆಳಾಲು ಶ್ರೀ.ಧ. ಮ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ ಸೆ.19ರಂದು ನಡೆಯಿತು .

ಸಭೆಯಲ್ಲಿ ವಿದ್ಯಾರ್ಥಿಗಳ ಶಿಸ್ತು, ಗೈರು ಹಾಜರಾತಿ, ಮೊಬೈಲ್ ಬಳಕೆಯ ನಿಯಂತ್ರಣ, ಮಾದಕ ವ್ಯಸನದ ಬಗೆಗಿನ ಜಾಗೃತಿ, ದ್ವಿ ಚಕ್ರ ವಾಹನಗಳ ಬಳಕೆಯ ಬಗೆಗಿನ ಎಚ್ಚರಿಕೆ, ಅನಗತ್ಯ ಆಹಾರದ ಸೇವನೆ (ಜಂಕ್ ಫುಡ್) ಮುಂತಾದ ವಿಷಯಗಳ ಬಗ್ಗೆ ಜಾಗೃತಿಯ ಮಾತುಗಳನ್ನು ಹಾಗೂ ಶಾಲೆಯ ಪಾಠ ಪ್ರವಚನ, ಶೈಕ್ಷಣಿಕ ಸಾಹಿತ್ಯ -ಸಾಧನ ಕಾರ್ಯಕ್ರಮಗಳ ಬಗೆಗೆ, ಕ್ರೀಡಾ ಸಾಧನೆಗಳ ಬಗೆಗೆ ಮಾಹಿತಿಯನ್ನು ನೀಡಿ, ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಆಡಳಿತ ಮಂಡಳಿ ನೀಡಿದ ನಿರ್ದೇಶನ, ಸಹಕಾರ- ಸಹಾಯಗಳನ್ನು ತಿಳಿಸಿ, ವಿದ್ಯಾರ್ಥಿಗಳ ಪ್ರಗತಿಯಲ್ಲಿ ಪೋಷಕರ ಪಾತ್ರದ ಬಗ್ಗೆ ಮುಖ್ಯ ಶಿಕ್ಷಕ ಜಯರಾಮ ಮಯ್ಯ ಮಾಹಿತಿಯನ್ನು ನೀಡಿದರು.

ಅಧ್ಯಾಪಕ ವೃಂದದವರು ಸಹಕರಿಸಿದರು. ಹೆಚ್ಚಿನ ಸಂಖ್ಯೆಯ ಪೋಷಕರು ಸಭೆಯಲ್ಲಿ ಭಾಗವಹಿಸಿ, ಬಳಿಕ ವಿದ್ಯಾರ್ಥಿಗಳ ಪ್ರಗತಿಯನ್ನು ವೈಯಕ್ತಿಕವಾಗಿ ಶಿಕ್ಷಕರೊಂದಿಗೆ ವಿಶ್ಲೇಷಿಸಿದರು.

Related posts

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮೂಡುಕೋಡಿ: ಪ್ರಗತಿಪರ ಕೃಷಿಕ ಶ್ರೀಧರ ಪೂಜಾರಿ ನಿಧನ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ಶಾಸಕ ಹರೀಶ್ ಪೂಂಜರವರ ಪ್ರಯತ್ನದಿಂದ ಮಾಲಾಡಿ ಗ್ರಾಮದ ಊರ್ಲ ರಸ್ತೆಯ ಕಾಂಕ್ರೀಟಿಕರಣ

Suddi Udaya

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

Suddi Udaya
error: Content is protected !!