23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

ಬೆಳಾಲು : ಬೆಳಾಲು ಶ್ರೀ.ಧ. ಮ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ ಸೆ.19ರಂದು ನಡೆಯಿತು .

ಸಭೆಯಲ್ಲಿ ವಿದ್ಯಾರ್ಥಿಗಳ ಶಿಸ್ತು, ಗೈರು ಹಾಜರಾತಿ, ಮೊಬೈಲ್ ಬಳಕೆಯ ನಿಯಂತ್ರಣ, ಮಾದಕ ವ್ಯಸನದ ಬಗೆಗಿನ ಜಾಗೃತಿ, ದ್ವಿ ಚಕ್ರ ವಾಹನಗಳ ಬಳಕೆಯ ಬಗೆಗಿನ ಎಚ್ಚರಿಕೆ, ಅನಗತ್ಯ ಆಹಾರದ ಸೇವನೆ (ಜಂಕ್ ಫುಡ್) ಮುಂತಾದ ವಿಷಯಗಳ ಬಗ್ಗೆ ಜಾಗೃತಿಯ ಮಾತುಗಳನ್ನು ಹಾಗೂ ಶಾಲೆಯ ಪಾಠ ಪ್ರವಚನ, ಶೈಕ್ಷಣಿಕ ಸಾಹಿತ್ಯ -ಸಾಧನ ಕಾರ್ಯಕ್ರಮಗಳ ಬಗೆಗೆ, ಕ್ರೀಡಾ ಸಾಧನೆಗಳ ಬಗೆಗೆ ಮಾಹಿತಿಯನ್ನು ನೀಡಿ, ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಆಡಳಿತ ಮಂಡಳಿ ನೀಡಿದ ನಿರ್ದೇಶನ, ಸಹಕಾರ- ಸಹಾಯಗಳನ್ನು ತಿಳಿಸಿ, ವಿದ್ಯಾರ್ಥಿಗಳ ಪ್ರಗತಿಯಲ್ಲಿ ಪೋಷಕರ ಪಾತ್ರದ ಬಗ್ಗೆ ಮುಖ್ಯ ಶಿಕ್ಷಕ ಜಯರಾಮ ಮಯ್ಯ ಮಾಹಿತಿಯನ್ನು ನೀಡಿದರು.

ಅಧ್ಯಾಪಕ ವೃಂದದವರು ಸಹಕರಿಸಿದರು. ಹೆಚ್ಚಿನ ಸಂಖ್ಯೆಯ ಪೋಷಕರು ಸಭೆಯಲ್ಲಿ ಭಾಗವಹಿಸಿ, ಬಳಿಕ ವಿದ್ಯಾರ್ಥಿಗಳ ಪ್ರಗತಿಯನ್ನು ವೈಯಕ್ತಿಕವಾಗಿ ಶಿಕ್ಷಕರೊಂದಿಗೆ ವಿಶ್ಲೇಷಿಸಿದರು.

Related posts

ಕೋವಿಡ್ ನಲ್ಲಿ ಹೆತ್ತವರನ್ನು ಕಳೆದುಕೊಂಡವರ ಮಕ್ಕಳಿಗೆ ಶಿಕ್ಷಣಕ್ಕಾಗಿ ಶುಲ್ಕ ವಿತರಣೆ

Suddi Udaya

ಜ.8-12: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ : ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ನೇತೃತ್ವದಲ್ಲಿ ಪೂರ್ವಾಸಿದ್ದತಾ ಸಭೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ಲೈವುಡ್ ಉತ್ಪನ್ನಗಳ ಪ್ರಖ್ಯಾತ ಮಳಿಗೆ “ಆನ್‌ಪ್ಲೈ” ಲಾಯಿಲದಲ್ಲಿ ಶುಭಾರಂಭ

Suddi Udaya

ಎಸೆಸೆಲ್ಸಿ ಫಲಿತಾಂಶ ಪ್ರಕಟ- ಈ ಬಾರಿಯೂ ಬಾಲಕಿಯರೇ ಮೇಲುಗೈ

Suddi Udaya

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮನಿಧಿ ಯೋಜನೆಯ ಸಹಾಯಧನ ಹಸ್ತಾಂತರ

Suddi Udaya
error: Content is protected !!