September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ವಾರ್ಷಿಕ ಮಹಾಸಭೆಯು ಸೆ.20ರಂದು ಸಂಘದ ಅಧ್ಯಕ್ಷರಾದ ಲಿಂಗಪ್ಪ ನಾಯ್ಕ ಉರುವಾಲು ಇವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತಿ ವಾರ್ಷಿಕ ಲೆಕ್ಕಪತ್ರಗಳನ್ನು ಮಂಡಿಸಿದರು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ಕೃಷಿ ಕೇತ್ರದಲ್ಲಿ ವಿಶೇಷ ಸಾಧನೆಗೈದ ಕೇಶವ ಎಂ ಕೆ ಕರ್ಮಯೋಗಿ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಉಪಾಧ್ಯಕ್ಷ ಸಂತೋಷ್ ನಾಯ್ಕ, ನಿರ್ದೇಶಕರುಗಳಾದ, ಪ್ರಸಾದ್ ನಾಯ್ಕ, ಪ್ರಶಾಂತ ನಾಯ್ಕ, ತಾರನಾಥ, ಲೀಲಾವತಿ, ಸವಿತಾ ಹಾಗೂ ಸಂಘದ ಸಿಬ್ಬಂದಿ ವರ್ಗ, ಪಿಗ್ಗಿ ಸಂಗ್ರಹಗಾರರು ಹಾಗೂ ಸಂಘದ ಸದಸ್ಯರು ಹಾಜರಿದ್ದರು.

ನಿರ್ದೇಶಕ ಸೀತಾರಾಮ್ ಬಿ. ಎಸ್. ಬೆಳಾಲು ಸ್ವಾಗತಿಸಿ, ಚಿದಾನಂದ ಕಾರ್ಯಕ್ರಮ ನಿರೂಪಿಸಿ ನಿರ್ದೇಶಕ ಚೆನ್ನಕೇಶವ ಧನ್ಯವಾದವಿತ್ತರು.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹರ್ಷೇಂದ್ರ ಕುಮಾರ್ ರವರಿಗೆ ಶ್ರೀ ಕ್ಷೇತ್ರ ಅರಮಲೆಬೆಟ್ಟ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗ್ರಾಹಕರ ಸಭೆ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ರೂ. 164.75 ಕೋಟಿ ವ್ಯವಹಾರ, ರೂ.72.70 ಲಕ್ಷ ನಿವ್ವಳ ಲಾಭ, ಶೇ.16 ಡಿವಿಡೆಂಟ್ ಘೋಷಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ: 18216 ಮತಗಳ ಅಂತರದಿಂದ ಹರೀಶ್ ಪೂಂಜ ಪ್ರಚಂಡ ಗೆಲುವು: ರಕ್ಷಿತ್ ಶಿವರಾಂಗೆ ಸೋಲು

Suddi Udaya

ಗುರುವಾಯನಕೆರೆ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!