April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ತಾಲೂಕಿನಾದ್ಯಂತ ಮಹಿಳೆಯರ ಬಲವರ್ಧನೆಯ ಗುರಿಯೊಂದಿಗೆ ಸ್ವಸಹಾಯ ಸಂಘವನ್ನು ಆರಂಭಿಸಲಾಗುತ್ತಿದ್ದು ಅದರಂತೆ ಇದೀಗ ಗುರಿಪಳ್ಳದ ಕೊಡೆಕ್ಕಲ್, ನೂಚಿಲ ಪರಿಸರದ ಮಹಿಳೆಯರು ಒಟ್ಟು ಸೇರಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘವನ್ನು ರಚಿಸಿ ಉದ್ಘಾಟಿಸಲಾಯಿತು.

ಉದ್ಘಾಟನೆಯನ್ನು ಹಿರಿಯರಾದ ವೆಂಕಪ್ಪ ಪೂಜಾರಿ ಕೊಡೆಕ್ಕಲ್ ನೆರವೇರಿಸಿದರು.

ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷ ಎಂ. ಕೆ. ಪ್ರಸಾದ್ ಸ್ವಸಹಾಯ ಸಂಘದ ಕಾರ್ಯಶೈಲಿಯ ಬಗ್ಗೆ ಮಾಹಿತಿ ನೀಡಿದರು.

ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ನಿರ್ದೇಶಕ ಗುರುರಾಜ್ ಗುರಿಪಳ್ಳ, ಯುವ ಬಿಲ್ಲವ ವೇದಿಕೆ ಪ್ರ.ಕಾರ್ಯದರ್ಶಿ ಸಂತೋಷ್ ಸಾಲಿಯಾನ್ ಅರಳಿ ಶುಭ ಹಾರೈಸಿದರು.

ಸ್ವಸಹಾಯ ಸಂಘದ ಅಧ್ಯಕ್ಷರಾಗಿ ಶ್ರೀಮತಿ ಮೋಹಿನಿ, ಕಾರ್ಯದರ್ಶಿಯಾಗಿ ಶ್ರೀಮತಿ ಸವಿತಾ, ಕೋಶಾಧಿಕಾರಿಯಾಗಿ ಶ್ರೀಮತಿ ಪ್ರತಿಭಾ ಆಯ್ಕೆಯಾದರು. ಸಂಘದ ಸದಸ್ಯರಾದ ಶ್ರೀಮತಿ ಅನಿತಾ ಸ್ವಾಗತಿಸಿ, ಶ್ರೀಮತಿ ದೇವಕಿ ಧನ್ಯವಾದವಿತ್ತರು.

Related posts

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

Suddi Udaya

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಲಾಪೋಷಕ ಟಿ.ಶಾಮ್ ಭಟ್ ಇವರಿಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
error: Content is protected !!