30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ತಾಲೂಕಿನಾದ್ಯಂತ ಮಹಿಳೆಯರ ಬಲವರ್ಧನೆಯ ಗುರಿಯೊಂದಿಗೆ ಸ್ವಸಹಾಯ ಸಂಘವನ್ನು ಆರಂಭಿಸಲಾಗುತ್ತಿದ್ದು ಅದರಂತೆ ಇದೀಗ ಗುರಿಪಳ್ಳದ ಕೊಡೆಕ್ಕಲ್, ನೂಚಿಲ ಪರಿಸರದ ಮಹಿಳೆಯರು ಒಟ್ಟು ಸೇರಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘವನ್ನು ರಚಿಸಿ ಉದ್ಘಾಟಿಸಲಾಯಿತು.

ಉದ್ಘಾಟನೆಯನ್ನು ಹಿರಿಯರಾದ ವೆಂಕಪ್ಪ ಪೂಜಾರಿ ಕೊಡೆಕ್ಕಲ್ ನೆರವೇರಿಸಿದರು.

ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷ ಎಂ. ಕೆ. ಪ್ರಸಾದ್ ಸ್ವಸಹಾಯ ಸಂಘದ ಕಾರ್ಯಶೈಲಿಯ ಬಗ್ಗೆ ಮಾಹಿತಿ ನೀಡಿದರು.

ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ನಿರ್ದೇಶಕ ಗುರುರಾಜ್ ಗುರಿಪಳ್ಳ, ಯುವ ಬಿಲ್ಲವ ವೇದಿಕೆ ಪ್ರ.ಕಾರ್ಯದರ್ಶಿ ಸಂತೋಷ್ ಸಾಲಿಯಾನ್ ಅರಳಿ ಶುಭ ಹಾರೈಸಿದರು.

ಸ್ವಸಹಾಯ ಸಂಘದ ಅಧ್ಯಕ್ಷರಾಗಿ ಶ್ರೀಮತಿ ಮೋಹಿನಿ, ಕಾರ್ಯದರ್ಶಿಯಾಗಿ ಶ್ರೀಮತಿ ಸವಿತಾ, ಕೋಶಾಧಿಕಾರಿಯಾಗಿ ಶ್ರೀಮತಿ ಪ್ರತಿಭಾ ಆಯ್ಕೆಯಾದರು. ಸಂಘದ ಸದಸ್ಯರಾದ ಶ್ರೀಮತಿ ಅನಿತಾ ಸ್ವಾಗತಿಸಿ, ಶ್ರೀಮತಿ ದೇವಕಿ ಧನ್ಯವಾದವಿತ್ತರು.

Related posts

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ: ರೂ. 6.74 ಲಕ್ಷ ಲಾಭ, ಶೇ.20 ಡಿವಿಡೆಂಟ್

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya
error: Content is protected !!