23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ತಾಲೂಕಿನಾದ್ಯಂತ ಮಹಿಳೆಯರ ಬಲವರ್ಧನೆಯ ಗುರಿಯೊಂದಿಗೆ ಸ್ವಸಹಾಯ ಸಂಘವನ್ನು ಆರಂಭಿಸಲಾಗುತ್ತಿದ್ದು ಅದರಂತೆ ಇದೀಗ ಗುರಿಪಳ್ಳದ ಕೊಡೆಕ್ಕಲ್, ನೂಚಿಲ ಪರಿಸರದ ಮಹಿಳೆಯರು ಒಟ್ಟು ಸೇರಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘವನ್ನು ರಚಿಸಿ ಉದ್ಘಾಟಿಸಲಾಯಿತು.

ಉದ್ಘಾಟನೆಯನ್ನು ಹಿರಿಯರಾದ ವೆಂಕಪ್ಪ ಪೂಜಾರಿ ಕೊಡೆಕ್ಕಲ್ ನೆರವೇರಿಸಿದರು.

ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷ ಎಂ. ಕೆ. ಪ್ರಸಾದ್ ಸ್ವಸಹಾಯ ಸಂಘದ ಕಾರ್ಯಶೈಲಿಯ ಬಗ್ಗೆ ಮಾಹಿತಿ ನೀಡಿದರು.

ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ನಿರ್ದೇಶಕ ಗುರುರಾಜ್ ಗುರಿಪಳ್ಳ, ಯುವ ಬಿಲ್ಲವ ವೇದಿಕೆ ಪ್ರ.ಕಾರ್ಯದರ್ಶಿ ಸಂತೋಷ್ ಸಾಲಿಯಾನ್ ಅರಳಿ ಶುಭ ಹಾರೈಸಿದರು.

ಸ್ವಸಹಾಯ ಸಂಘದ ಅಧ್ಯಕ್ಷರಾಗಿ ಶ್ರೀಮತಿ ಮೋಹಿನಿ, ಕಾರ್ಯದರ್ಶಿಯಾಗಿ ಶ್ರೀಮತಿ ಸವಿತಾ, ಕೋಶಾಧಿಕಾರಿಯಾಗಿ ಶ್ರೀಮತಿ ಪ್ರತಿಭಾ ಆಯ್ಕೆಯಾದರು. ಸಂಘದ ಸದಸ್ಯರಾದ ಶ್ರೀಮತಿ ಅನಿತಾ ಸ್ವಾಗತಿಸಿ, ಶ್ರೀಮತಿ ದೇವಕಿ ಧನ್ಯವಾದವಿತ್ತರು.

Related posts

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ವಸಂತಿ ಗೌಡ ಇವರಿಂದ ದೇಣಿಗೆ

Suddi Udaya

ಜಿಲ್ಲಾ ಕಾರಾಗೃಹದಲ್ಲಿ ಯೋಗ ಬೋಧನೆ

Suddi Udaya

ಜಮೀಯತುಲ್ ಫಲಾಹ್ ಘಟಕದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ಲಾರಿ-ಕಾರು ಮಧ್ಯೆ ಅಪಘಾತ: ಕಾರು ನಜ್ಜುಗುಜ್ಜು

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಅಭಿನಂದನ್ ಹರೀಶ್ ಕುಮಾರ್ ಮತ್ತಿತರರ ವಿರುದ್ಧದ ಸಮನ್ಸ್ ಗೆ ಜಿಲ್ಲಾ ನ್ಯಾಯಾಲಯದಿಂದ ತಡೆ

Suddi Udaya
error: Content is protected !!