23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ತಾಲೂಕಿನಾದ್ಯಂತ ಮಹಿಳೆಯರ ಬಲವರ್ಧನೆಯ ಗುರಿಯೊಂದಿಗೆ ಸ್ವಸಹಾಯ ಸಂಘವನ್ನು ಆರಂಭಿಸಲಾಗುತ್ತಿದ್ದು ಅದರಂತೆ ಇದೀಗ ಗುರಿಪಳ್ಳದ ಕೊಡೆಕ್ಕಲ್, ನೂಚಿಲ ಪರಿಸರದ ಮಹಿಳೆಯರು ಒಟ್ಟು ಸೇರಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘವನ್ನು ರಚಿಸಿ ಉದ್ಘಾಟಿಸಲಾಯಿತು.

ಉದ್ಘಾಟನೆಯನ್ನು ಹಿರಿಯರಾದ ವೆಂಕಪ್ಪ ಪೂಜಾರಿ ಕೊಡೆಕ್ಕಲ್ ನೆರವೇರಿಸಿದರು.

ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷ ಎಂ. ಕೆ. ಪ್ರಸಾದ್ ಸ್ವಸಹಾಯ ಸಂಘದ ಕಾರ್ಯಶೈಲಿಯ ಬಗ್ಗೆ ಮಾಹಿತಿ ನೀಡಿದರು.

ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ನಿರ್ದೇಶಕ ಗುರುರಾಜ್ ಗುರಿಪಳ್ಳ, ಯುವ ಬಿಲ್ಲವ ವೇದಿಕೆ ಪ್ರ.ಕಾರ್ಯದರ್ಶಿ ಸಂತೋಷ್ ಸಾಲಿಯಾನ್ ಅರಳಿ ಶುಭ ಹಾರೈಸಿದರು.

ಸ್ವಸಹಾಯ ಸಂಘದ ಅಧ್ಯಕ್ಷರಾಗಿ ಶ್ರೀಮತಿ ಮೋಹಿನಿ, ಕಾರ್ಯದರ್ಶಿಯಾಗಿ ಶ್ರೀಮತಿ ಸವಿತಾ, ಕೋಶಾಧಿಕಾರಿಯಾಗಿ ಶ್ರೀಮತಿ ಪ್ರತಿಭಾ ಆಯ್ಕೆಯಾದರು. ಸಂಘದ ಸದಸ್ಯರಾದ ಶ್ರೀಮತಿ ಅನಿತಾ ಸ್ವಾಗತಿಸಿ, ಶ್ರೀಮತಿ ದೇವಕಿ ಧನ್ಯವಾದವಿತ್ತರು.

Related posts

ವಿಜ್ಞಾನ ವಿಭಾಗದಲ್ಲಿ 597 ಅಂಕ ಗಳಿಸಿದ ಕೊಕ್ಕಡದ ಅನಘ ಕೆ.

Suddi Udaya

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಪುತ್ತೂರು ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

Suddi Udaya

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya

ಕುವೆಟ್ಟು : ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya
error: Content is protected !!