25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ತಾಲೂಕಿನಾದ್ಯಂತ ಮಹಿಳೆಯರ ಬಲವರ್ಧನೆಯ ಗುರಿಯೊಂದಿಗೆ ಸ್ವಸಹಾಯ ಸಂಘವನ್ನು ಆರಂಭಿಸಲಾಗುತ್ತಿದ್ದು ಅದರಂತೆ ಇದೀಗ ಗುರಿಪಳ್ಳದ ಕೊಡೆಕ್ಕಲ್, ನೂಚಿಲ ಪರಿಸರದ ಮಹಿಳೆಯರು ಒಟ್ಟು ಸೇರಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘವನ್ನು ರಚಿಸಿ ಉದ್ಘಾಟಿಸಲಾಯಿತು.

ಉದ್ಘಾಟನೆಯನ್ನು ಹಿರಿಯರಾದ ವೆಂಕಪ್ಪ ಪೂಜಾರಿ ಕೊಡೆಕ್ಕಲ್ ನೆರವೇರಿಸಿದರು.

ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷ ಎಂ. ಕೆ. ಪ್ರಸಾದ್ ಸ್ವಸಹಾಯ ಸಂಘದ ಕಾರ್ಯಶೈಲಿಯ ಬಗ್ಗೆ ಮಾಹಿತಿ ನೀಡಿದರು.

ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ನಿರ್ದೇಶಕ ಗುರುರಾಜ್ ಗುರಿಪಳ್ಳ, ಯುವ ಬಿಲ್ಲವ ವೇದಿಕೆ ಪ್ರ.ಕಾರ್ಯದರ್ಶಿ ಸಂತೋಷ್ ಸಾಲಿಯಾನ್ ಅರಳಿ ಶುಭ ಹಾರೈಸಿದರು.

ಸ್ವಸಹಾಯ ಸಂಘದ ಅಧ್ಯಕ್ಷರಾಗಿ ಶ್ರೀಮತಿ ಮೋಹಿನಿ, ಕಾರ್ಯದರ್ಶಿಯಾಗಿ ಶ್ರೀಮತಿ ಸವಿತಾ, ಕೋಶಾಧಿಕಾರಿಯಾಗಿ ಶ್ರೀಮತಿ ಪ್ರತಿಭಾ ಆಯ್ಕೆಯಾದರು. ಸಂಘದ ಸದಸ್ಯರಾದ ಶ್ರೀಮತಿ ಅನಿತಾ ಸ್ವಾಗತಿಸಿ, ಶ್ರೀಮತಿ ದೇವಕಿ ಧನ್ಯವಾದವಿತ್ತರು.

Related posts

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಕುಟುಂಬೋತ್ಸವ

Suddi Udaya

ಡಿ.14: ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 30 ನೇ ಸಹಾಯಧನ ಹಸ್ತಾಂತರ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನೆ

Suddi Udaya

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!