22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಹೈನುಗಾರಿಕೆ ತರಬೇತಿಯ ಸಮಾರೋಪ

ಉಜಿರೆ: ತರಬೇತಿ ಸಂಸ್ಥೆಗಳಲ್ಲಿ ರುಡ್‌ಸೆಟ್ ಸಂಸ್ಥೆಯ ತರಬೇತಿಯು ಬಹಳ ಅತ್ಯುತ್ತಮ ಗುಣಮಟ್ಟದಾಗಿದ್ದು ಸರಕಾರಗಳು ಇದನ್ನು ಅಂಗೀಕರಿಸಿವೆ. ಜೀವನದಲ್ಲಿ ಸಾಗರದಷ್ಟು ಕಲಿಯಬೇಕಾಗಿದೆ. ಇದರಲ್ಲಿ ಸ್ವಲ್ಪವಾದರು ನಾವು ಕಲಿಬೇಕು, ಸಾವಯವ ಕೃಷಿಗೆ ಹೆಚ್ಚು ಒತ್ತು ಕೊಟ್ಟಾಗ, ತನ್ನಷ್ಟಕ್ಕೆ ಎರೆಹುಳಗಳು ಜಾಸ್ತಿಯಾಗುತ್ತದೆ. ನಮ್ಮ ಪೂರ್ವಜರು ಬಿಟ್ಟು ಹೋದ ಈ ಒಳ್ಳೆಯ ಪರಿಸರವನ್ನು ನಮ್ಮ ಮುಂದಿನ ಪೀಳಿಗೆ ಹಸ್ತಾಂತರಿಸುವುದು ನಮ್ಮ ಕರ್ತವ್ಯ. ಹೈನುಗಾರಿಕೆಯನ್ನು ಸಾಂಪ್ರಾದಯಕವಾಗಿ ಮಾಡುವುದರ ಜೊತೆಗೆ ವೈಜ್ಞಾನಿಕವಾಗಿ ಕೊಡ ಅಳವಡಿಸಿಕೊಂಡಾಗ ಯಶಸ್ಸು ಅನ್ನು ಗಳಿಸಬಹುದು. ಹಾಲು ಮತ್ತು ಹಾಲಿನ ಉತ್ಪನ್ನಗಳಿಗೆ ಸಾಕಷ್ಟು ಬೇಡಿಕೆ ಇದೆ. ಈ ಬೇಡಿಕೆಗೆ ಅನುಗುಣವಾಗಿ ಹಾಲನ್ನು ಪೂರೈಸಲು ನಾವು ಪ್ರಯತ್ನಿಸೋಣ ಎಂದು ದ.ಕ.ಜಿಲ್ಲಾ ಪಂಚಾಯುತ್‌ನ ಯೋಜನಾ ನಿರ್ದೇಶಕ ಜಯರಾಜ್ ಕೆ.ಇ. ಅಭಿಪ್ರಾಯಪಟ್ಟರು.

ಅವರು ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದೆ ಹೈನುಗಾರಿಕೆ ಮತ್ತು ಎರೆಹುಳಗೊಬ್ಬರ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತ್ತರಿಸಿ ಮಾತನಾಡಿದರು. ಪಡೆದ ತರಬೇತಿಯನ್ನು ಉಪಯೋಗಿಸಿಕೊಂಡು ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ವಹಿಸಿ ಏನಾದರೂ ಮಾಹಿತಿ-ಮಾರ್ಗದರ್ಶನ ಬೇಕಾದರೆ ಸಂಸ್ಥೆಯನ್ನು ಸಂಪರ್ಕಿಸಿ ಎಂದು ಶುಭ ಕೋರಿದರು.

ಅತಿಥಿಗಳನ್ನು ರುಡ್‌ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಛೇರಿ ಸಹಾಯಕಿ ಶ್ರೀಮತಿ ರಶ್ಮಿ ವಂದಿಸಿದರು.

Related posts

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂಡಳಿಯ ಸದಸ್ಯರುಗಳಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಗದ್ದೆಯಿಂದ ನೇಜಿ ತೆಗೆದು ತಾವೇ ನಾಟಿ ಮಾಡಿದ ಮಕ್ಕಳು: ಕೊಯ್ಯೂರು ಸರಕಾರಿ ಶಾಲೆಯ 70 ಮಕ್ಕಳಿಗೆ ಕೃಷಿ ಪಾಠದ ಸಂಭ್ರಮ ; ಶಿಕ್ಷಕರ, ಪೋಷಕರ ಸಾಥ್

Suddi Udaya

ಹಿರಿಯ ಯಕ್ಷಗಾನ ಕಲಾವಿದ, ನಿವೃತ್ತ ಶಿಕ್ಷಕ ಎಸ್.ಬಿ. ನರೇಂದ್ರ ಕುಮಾರ್ ನಿಧನ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ದೀಪಾವಳಿ ಸಂಭ್ರಮಾಚರಣೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ: ವನಮಹೋತ್ಸವ ಹಾಗೂ ಆರೋಗ್ಯ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯ ವಿದ್ಯಾರ್ಥಿಗಳು ಬುಲ್ ಬುಲ್ಸ್ ಗೀತಾ ಗಾಯನದಲ್ಲಿ ದ್ವಿತೀಯ

Suddi Udaya
error: Content is protected !!