23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

ಪತ್ರಿಕಾಗೋಷ್ಠಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್‌ಎಸ್) ಆಸ್ತಿತ್ವಕ್ಕೆ ಬಂದಿದ್ದು, ಸರಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಹೋರಾಟಗಳನ್ನು ನಡೆಸಿ, ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿಯನ್ನು ಕೆಆರ್‌ಎಸ್ ಹೊಂದಿದೆ ಎಂದು ಕೆಆರ್‌ಎಸ್ ಪಕ್ಷದ ಜಿಲ್ಲಾಧ್ಯಕ್ಷ ವೇಣುಗೋಪಾಲ್ ಹೇಳಿದರು.

ಅವರು ಸೆ.20ರಂದು ಬೆಳ್ತಂಗಡಿ ಶ್ರೀಗುರುನಾರಾಯಣ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, 2016ರಲ್ಲಿ ಕೃಷ್ಣರೆಡ್ಡಿಯವರ ನೇತೃತ್ವದಲ್ಲಿ ಈ ಪಕ್ಷ ಸ್ಥಾಪನೆಯಾಗಿದ್ದು, ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಮೂಲಕ ರಾಜ್ಯದ ನೂರಾರು ಸರಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಅಭಿಯಾನ ನಡೆಸುತ್ತಿದೆ. ಸರಕಾರಿ ಕಚೇರಿಗಳಿಗೆ ಬರುವ ಜನಸಾಮಾನ್ಯರಿಗೆ ಅಧಿಕಾರಿಗಳು ಗೌರವ ನೀಡುತ್ತಿಲ್ಲ, ಬಡವರಿಗೆ ಅನ್ಯಾಯವಾಗುತ್ತಿದೆ. ಯಾವುದೇ ಕೆಲಸ ಲಂಚ ನೀಡದೆ ಆಗುತ್ತಿಲ್ಲ, ತಾಲೂಕು ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಇದೆ. ಇಂತಹ ವಿಷಯಗಳ ದೂರು ನಮಗೆ ಬಂದಾಗ ನಾವು ಅಮಾಯಕರ ಪರವಾಗಿ ಹೋರಾಟಗಳನ್ನು ನಡೆಸುತ್ತೇವೆ. ಯಾವುದೇ ದೌರ್ಜನ್ಯ, ದಬ್ಬಾಳಿಕೆ, ಶೋಷಣೆ, ಅನ್ಯಾಯಗಳು ನಡೆದಾಗ ನಮ್ಮ ಕಾರ್ಯಕರ್ತರು ನ್ಯಾಯ ಒದಗಿಸಿ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.

ಬಂಟ್ವಾಳ ಜೆಂಕ್ಷನ್‌ನಲ್ಲಿ ನಮ್ಮ ಪಕ್ಷದ ಜಿಲ್ಲಾ ಕಚೇರಿ ಇದ್ದು, ಸರಕಾರಿ ಕಚೇರಿಗಳಲ್ಲಿ ಆಗುತ್ತಿರುವ ಸಮಸ್ಯೆಗಳ ಕುರಿತು ಸಾರ್ವಜನಿಕರು ನಮ್ಮ ಗಮನಕ್ಕೆ ತರಬಹುದು. ಪತ್ರಿಕೆ ಅಥವಾ ಮಾಧ್ಯಮದ ಮೂಲಕ ನಮ್ಮ ಗಮನಕ್ಕೆ ಬಂದರೆ, ನಾವಾಗಿಯೇ ಖುದ್ದು ಬಂದು ಅವರಿಗೆ ಕೆಲಸ ಮಾಡಿಸಿಕೊಡುತ್ತೇವೆ. ಬೆಳ್ತಂಗಡಿ ತಾಲೂಕಿನಲ್ಲಿ ಈಗ ಪಕ್ಷ ಆಸ್ತಿತ್ವಕ್ಕೆ ಬಂದಿದ್ದು, ಮುಂದೆ ತಾಲೂಕಿನಲ್ಲಿ ಪಕ್ಷದ ಕಚೇರಿ ಆರಂಭವಾಗಲಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಅಧ್ಯಕ್ಷ ಹೈದರಾಲಿ, ಪ್ರಧಾನ ಕಾರ್ಯದರ್ಶಿ ರಫೀಕ್ ಉಪ್ಪಿನಂಗಡಿ, ಕಾರ್ಯದರ್ಶಿಗಳಾದ ಆಶ್ರಫ್ ಜಾರಿಗೆಬೈಲ್, ರಮೀಝ್, ನಝೀರ್, ಜಿಲ್ಲಾ ಸಮಿತಿಯ ಕಾರ್ಯದರ್ಶಿ ಸಲೀಂ ಜಾರಿಗೆಬೈಲ್, ಶುಕ್ರು ಜಾರಿಗೆಬೈಲ್, ಜಿಲ್ಲಾ ಸಮಿತಿಯ ಅನೀಸ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ರಾವ್ ರವರಿಗೆ ಬೀಳ್ಕೂಡುಗೆ ಸಮಾರಂಭ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ ಅಧ್ಯಕ್ಷರಾಗಿ ಜಯರಾಮ ಕುದ್ರೆತ್ತಾಯ ಧರ್ಮಸ್ಥಳ ಆಯ್ಕೆ

Suddi Udaya

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತ ಚಲಾವಣೆ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 12 ಕ್ಷೇತ್ರಗಳಲ್ಲೂ ಜಯಭೇರಿ, 1 ಕ್ಷೇತ್ರಕ್ಕೆ ಅವಿರೋಧ ಆಯ್ಕೆ

Suddi Udaya

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

Suddi Udaya
error: Content is protected !!