25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

ಪತ್ರಿಕಾಗೋಷ್ಠಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್‌ಎಸ್) ಆಸ್ತಿತ್ವಕ್ಕೆ ಬಂದಿದ್ದು, ಸರಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಹೋರಾಟಗಳನ್ನು ನಡೆಸಿ, ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿಯನ್ನು ಕೆಆರ್‌ಎಸ್ ಹೊಂದಿದೆ ಎಂದು ಕೆಆರ್‌ಎಸ್ ಪಕ್ಷದ ಜಿಲ್ಲಾಧ್ಯಕ್ಷ ವೇಣುಗೋಪಾಲ್ ಹೇಳಿದರು.

ಅವರು ಸೆ.20ರಂದು ಬೆಳ್ತಂಗಡಿ ಶ್ರೀಗುರುನಾರಾಯಣ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, 2016ರಲ್ಲಿ ಕೃಷ್ಣರೆಡ್ಡಿಯವರ ನೇತೃತ್ವದಲ್ಲಿ ಈ ಪಕ್ಷ ಸ್ಥಾಪನೆಯಾಗಿದ್ದು, ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಮೂಲಕ ರಾಜ್ಯದ ನೂರಾರು ಸರಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಅಭಿಯಾನ ನಡೆಸುತ್ತಿದೆ. ಸರಕಾರಿ ಕಚೇರಿಗಳಿಗೆ ಬರುವ ಜನಸಾಮಾನ್ಯರಿಗೆ ಅಧಿಕಾರಿಗಳು ಗೌರವ ನೀಡುತ್ತಿಲ್ಲ, ಬಡವರಿಗೆ ಅನ್ಯಾಯವಾಗುತ್ತಿದೆ. ಯಾವುದೇ ಕೆಲಸ ಲಂಚ ನೀಡದೆ ಆಗುತ್ತಿಲ್ಲ, ತಾಲೂಕು ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಇದೆ. ಇಂತಹ ವಿಷಯಗಳ ದೂರು ನಮಗೆ ಬಂದಾಗ ನಾವು ಅಮಾಯಕರ ಪರವಾಗಿ ಹೋರಾಟಗಳನ್ನು ನಡೆಸುತ್ತೇವೆ. ಯಾವುದೇ ದೌರ್ಜನ್ಯ, ದಬ್ಬಾಳಿಕೆ, ಶೋಷಣೆ, ಅನ್ಯಾಯಗಳು ನಡೆದಾಗ ನಮ್ಮ ಕಾರ್ಯಕರ್ತರು ನ್ಯಾಯ ಒದಗಿಸಿ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.

ಬಂಟ್ವಾಳ ಜೆಂಕ್ಷನ್‌ನಲ್ಲಿ ನಮ್ಮ ಪಕ್ಷದ ಜಿಲ್ಲಾ ಕಚೇರಿ ಇದ್ದು, ಸರಕಾರಿ ಕಚೇರಿಗಳಲ್ಲಿ ಆಗುತ್ತಿರುವ ಸಮಸ್ಯೆಗಳ ಕುರಿತು ಸಾರ್ವಜನಿಕರು ನಮ್ಮ ಗಮನಕ್ಕೆ ತರಬಹುದು. ಪತ್ರಿಕೆ ಅಥವಾ ಮಾಧ್ಯಮದ ಮೂಲಕ ನಮ್ಮ ಗಮನಕ್ಕೆ ಬಂದರೆ, ನಾವಾಗಿಯೇ ಖುದ್ದು ಬಂದು ಅವರಿಗೆ ಕೆಲಸ ಮಾಡಿಸಿಕೊಡುತ್ತೇವೆ. ಬೆಳ್ತಂಗಡಿ ತಾಲೂಕಿನಲ್ಲಿ ಈಗ ಪಕ್ಷ ಆಸ್ತಿತ್ವಕ್ಕೆ ಬಂದಿದ್ದು, ಮುಂದೆ ತಾಲೂಕಿನಲ್ಲಿ ಪಕ್ಷದ ಕಚೇರಿ ಆರಂಭವಾಗಲಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಅಧ್ಯಕ್ಷ ಹೈದರಾಲಿ, ಪ್ರಧಾನ ಕಾರ್ಯದರ್ಶಿ ರಫೀಕ್ ಉಪ್ಪಿನಂಗಡಿ, ಕಾರ್ಯದರ್ಶಿಗಳಾದ ಆಶ್ರಫ್ ಜಾರಿಗೆಬೈಲ್, ರಮೀಝ್, ನಝೀರ್, ಜಿಲ್ಲಾ ಸಮಿತಿಯ ಕಾರ್ಯದರ್ಶಿ ಸಲೀಂ ಜಾರಿಗೆಬೈಲ್, ಶುಕ್ರು ಜಾರಿಗೆಬೈಲ್, ಜಿಲ್ಲಾ ಸಮಿತಿಯ ಅನೀಸ್ ಉಪಸ್ಥಿತರಿದ್ದರು.

Related posts

ಸಚಿವ ದಿನೇಶ್ ಗುಂಡೂರಾವ್‌ರಿಂದ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯ ಲೋಕಾರ್ಪಣೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಚಾರ್ಮಾಡಿ: ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿ

Suddi Udaya

ಪಾರೆoಕಿ ಗ್ರಾಮದ ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಇನ್ನೂ ಡಾಮರೀಕರಣ ಕಾಣದ ಲಾಯಿಲ ಗ್ರಾ.ಪಂ. ವ್ಯಾಪ್ತಿಯ ರಸ್ತೆಗಳು

Suddi Udaya

ತೋಟತ್ತಾಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya
error: Content is protected !!