24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

ಪಟ್ರಮೆ: ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆಯು ಸೆ.20ರಂದು ಪಟ್ಟೂರು ಹಾಲು ಖರೀದಿ ಕೇಂದ್ರದ ಆವರಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ವಹಿಸಿದ್ದರು.

ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಸುಂದರ ಪೂಜಾರಿ, ಪ್ರವೀಣ್ ಶೆಟ್ಟಿ ದೇರಾಜೆ, ಹೊನ್ನಪ್ಪ ಗೌಡ ಪೂವಾಜೆ, ಶಶಿಧರ್ ಬಡಿಜಾಲ್, ಹರೀಶ್ ಗುಂಡಿಲೆ, ಶ್ರೀಮತಿ ಹರಿಣಾಕ್ಷಿ ಗುಂಡಿಲೆ, ಶ್ರೀಮತಿ ವೇದಾವತಿ ಕೆಂಗುಡೆಲು, ಉಮೇಶ್ ಕೊಡಂಚಡ್ಕ, ಪುತ್ತ ಬಾಂತಿಮಾರು ಉಪಸ್ಥಿತರಿದ್ದರು.

ಸಂಘದ ಉಪ ಹಾಲು ಖರೀದಿ ಕೇಂದ್ರ ಪಕ್ಕದ ಮುಂಡೂರುಪಲಿಕೆಯಲ್ಲಿ ಪ್ರಾರಂಭವಾಗಿದ್ದು, ಹಾಗೇನೇ ಇನ್ನು ಮುಂದಕ್ಕೆ ಪಟ್ರಮೆಯಲ್ಲಿ ಕೂಡ ಹಾಲು ಖರೀದಿ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆ ತಿಳಿಸಿದರು.

ಸಂಘಕ್ಕೆ ಹಾಲು ಹಾಕುವ ಎಲ್ಲರಿಗೂ ಸಂಘದ ವತಿಯಿಂದ ಪ್ರೋತ್ಸಾಹಕರ ಬಹುಮಾನ ನೀಡಲಾಯಿತು. ಶ್ರೀಮತಿ ಸುಗಂಧಿ ಸ್ವಾಗತಿಸಿ, ವಂದಿಸಿದರು.

Related posts

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಭಯೋತ್ಪಾದಕರ ದಾಳಿ ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್‌ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯುಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!