23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳ್ತಂಗಡಿ; ಹದಿಹರೆಯದ ವಿದ್ಯಾರ್ಥಿಗಳ ಮನಸ್ಸು ತಿಳಿಯಾಗಿದ್ದು ಅದನ್ನು ಕೆದಕಿ ಅವರ‌ ಮನದಲ್ಲಿ ದುಶ್ಚಟ ಮತ್ತು ಇತರ ವಿಚಾರಗಳ ಬಗ್ಗೆ ತುಂಬುವ ಕಾರ್ಯ ಮಾಡುವ‌‌ ವ್ಯಕ್ತಿ ಮತ್ತು ಶಕ್ತಿಗಳ ಬಗ್ಗೆ ಸಾಕಷ್ಟು ಎಚ್ಚರ ವಹಿಸುವುದು ಅತೀ ಅಗತ್ಯ ಎಂದು ನಡ ಸರಕಾರಿ ಪ.ಪೂ ಕಾಲೇಜಿನ ಪ್ರಾಚಾರ್ಯ ಚಂದ್ರಶೇಖರ ಮರೋಡಿ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ, ಲಾಯಿಲ ವಲಯ, ತಾಲೂಕು ಜನಜಾಗೃತಿ ವೇದಿಕೆ ಬೆಳ್ತಂಗಡಿ, ಕಾಲೇಜಿನ ರೇಂಜರ್ಸ್ ವಿಭಾಗ ಹಾಗೂ ನಡ ಪದವಿ ಪೂರ್ವ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಅಜಿತ್‌ಕುಮಾರ್ ಆರಿಗಾ ಮಾತಮಾಡಿ, ಹೆಗ್ಗಡೆಯವರು ಜನ ಕಲ್ಯಾಣ ಕಾರ್ಯವಾಗಿ ಗ್ರಾ. ಯೋಜನೆ ಪ್ರಾರಂಭಿಸಿದರೂ ಜನರು ದುಶ್ಚಟಕ್ಕೆ ಸಿಲುಕಿ ನಷ್ಟ ಅನುಭವಿಸುತ್ತಿರುವುದನ್ನು ಮನಗಂಡು ವ್ಯಸನಮುಕ್ತ ಸಮಾಜದ ಕನಸು ಕಂಡರು ಎಂದು ಸ್ಮರಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿದ್ದ ಪತ್ರಕರ್ತ ಹಾಗೂ ಜನಜಾಗೃತಿ ವೇದಿಕೆ ತಾಲೂಕು ಸಮಿತಿ ಸದಸ್ಯ ಅಚ್ಚು ಮುಂಡಾಜೆ ಇವರು ಮಾತನಾಡಿ ವ್ಯಸನಗಳ ವಿಧಗಳು, ನೀಡುವ ಪರಿಣಾಮ, ಹಾಗೂ ಹೊರಬರಲು ಇರುವ ಮಾರ್ಗಗಳು ಇತ್ಯಾದಿ ವಿಚಾರಗಳನ್ನು ಉದಾಹರಣೆ ಸಹಿತ ತಿಳಿಸಿ, ವಿದ್ಯಾರ್ಥಿಗಳಿಗೆ ವ್ಯಸನಗಳ ವಿರುದ್ಧದ ಸಂಕಲ್ಪ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಪ್ರಗತಿಬಂಧು ಒಕ್ಕೂಟ ನಡ ಎ ಇದರ ಅಧ್ಯಕ್ಷ ಅಬ್ದುಲ್ ರಝಾಕ್, ಸೇವಾ ಪ್ರತಿನಿಧಿ ಶಕುಂತಲಾ ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಲಾಯಿಲ ವಲಯದ ಮೇಲ್ವಿಚಾರಕ ಸುಶಾಂತ್ ಪ್ರಸ್ತಾವನೆಗೈದರು.
ಉಪನ್ಯಾಸಕಿ ಲಿಲ್ಲಿ ಕಾರ್ಯಕ್ರಮ ನಿರೂಪಿಸಿದರು.ಉಪನ್ಯಾಸಕಿ ಶಿಲ್ಪಾ ಸ್ವಾಗತಿಸಿದರು. ಹಿರಿಯ ಉಪನ್ಯಾಸಕಿ ವಸಂತಿ ಜಿ ಕುಳಮರ್ವ ವಂದಿಸಿದರು.

Related posts

ಬೆಳ್ತಂಗಡಿ ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಸಂಸ್ಥೆಯಲ್ಲಿ ಆಟಿದ ರಂಗ್ ಕಾರ್ಯಕ್ರಮ

Suddi Udaya

ಉಜಿರೆ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ ; ಸರ್ವಧರ್ಮ ಸಮನ್ವಯ ಸಭೆ

Suddi Udaya

ವೇಣೂರು: ಬಜಿರೆ “ಸುರಭಿ” ಮನೆಯ ಬಿ. ರತ್ನವರ್ಮ ಇಂದ್ರ ನಿಧನ

Suddi Udaya

ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ನೆನಪಿನ ‘ಕುರಿಯ ಪ್ರಶಸ್ತಿ’ ಪ್ರದಾನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಡಿ.6: ಲಾಯಿಲ ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಪ್ರಶ್ನಾಚಿಂತನೆ

Suddi Udaya
error: Content is protected !!