September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳ್ತಂಗಡಿ; ಹದಿಹರೆಯದ ವಿದ್ಯಾರ್ಥಿಗಳ ಮನಸ್ಸು ತಿಳಿಯಾಗಿದ್ದು ಅದನ್ನು ಕೆದಕಿ ಅವರ‌ ಮನದಲ್ಲಿ ದುಶ್ಚಟ ಮತ್ತು ಇತರ ವಿಚಾರಗಳ ಬಗ್ಗೆ ತುಂಬುವ ಕಾರ್ಯ ಮಾಡುವ‌‌ ವ್ಯಕ್ತಿ ಮತ್ತು ಶಕ್ತಿಗಳ ಬಗ್ಗೆ ಸಾಕಷ್ಟು ಎಚ್ಚರ ವಹಿಸುವುದು ಅತೀ ಅಗತ್ಯ ಎಂದು ನಡ ಸರಕಾರಿ ಪ.ಪೂ ಕಾಲೇಜಿನ ಪ್ರಾಚಾರ್ಯ ಚಂದ್ರಶೇಖರ ಮರೋಡಿ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ, ಲಾಯಿಲ ವಲಯ, ತಾಲೂಕು ಜನಜಾಗೃತಿ ವೇದಿಕೆ ಬೆಳ್ತಂಗಡಿ, ಕಾಲೇಜಿನ ರೇಂಜರ್ಸ್ ವಿಭಾಗ ಹಾಗೂ ನಡ ಪದವಿ ಪೂರ್ವ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಅಜಿತ್‌ಕುಮಾರ್ ಆರಿಗಾ ಮಾತಮಾಡಿ, ಹೆಗ್ಗಡೆಯವರು ಜನ ಕಲ್ಯಾಣ ಕಾರ್ಯವಾಗಿ ಗ್ರಾ. ಯೋಜನೆ ಪ್ರಾರಂಭಿಸಿದರೂ ಜನರು ದುಶ್ಚಟಕ್ಕೆ ಸಿಲುಕಿ ನಷ್ಟ ಅನುಭವಿಸುತ್ತಿರುವುದನ್ನು ಮನಗಂಡು ವ್ಯಸನಮುಕ್ತ ಸಮಾಜದ ಕನಸು ಕಂಡರು ಎಂದು ಸ್ಮರಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿದ್ದ ಪತ್ರಕರ್ತ ಹಾಗೂ ಜನಜಾಗೃತಿ ವೇದಿಕೆ ತಾಲೂಕು ಸಮಿತಿ ಸದಸ್ಯ ಅಚ್ಚು ಮುಂಡಾಜೆ ಇವರು ಮಾತನಾಡಿ ವ್ಯಸನಗಳ ವಿಧಗಳು, ನೀಡುವ ಪರಿಣಾಮ, ಹಾಗೂ ಹೊರಬರಲು ಇರುವ ಮಾರ್ಗಗಳು ಇತ್ಯಾದಿ ವಿಚಾರಗಳನ್ನು ಉದಾಹರಣೆ ಸಹಿತ ತಿಳಿಸಿ, ವಿದ್ಯಾರ್ಥಿಗಳಿಗೆ ವ್ಯಸನಗಳ ವಿರುದ್ಧದ ಸಂಕಲ್ಪ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಪ್ರಗತಿಬಂಧು ಒಕ್ಕೂಟ ನಡ ಎ ಇದರ ಅಧ್ಯಕ್ಷ ಅಬ್ದುಲ್ ರಝಾಕ್, ಸೇವಾ ಪ್ರತಿನಿಧಿ ಶಕುಂತಲಾ ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಲಾಯಿಲ ವಲಯದ ಮೇಲ್ವಿಚಾರಕ ಸುಶಾಂತ್ ಪ್ರಸ್ತಾವನೆಗೈದರು.
ಉಪನ್ಯಾಸಕಿ ಲಿಲ್ಲಿ ಕಾರ್ಯಕ್ರಮ ನಿರೂಪಿಸಿದರು.ಉಪನ್ಯಾಸಕಿ ಶಿಲ್ಪಾ ಸ್ವಾಗತಿಸಿದರು. ಹಿರಿಯ ಉಪನ್ಯಾಸಕಿ ವಸಂತಿ ಜಿ ಕುಳಮರ್ವ ವಂದಿಸಿದರು.

Related posts

ನಿವೃತ ಡಿಸಿಪಿ ಡಿ. ಧರ್ಮಯ್ಯ ಹೃದಯಾಘಾತದಿಂದ ನಿಧನ

Suddi Udaya

ನಡ, ಮಡಂತ್ಯಾರು ಮತ್ತು ಕಲ್ಲೇರಿಯಲ್ಲಿ ಹರೀಶ್ ಪೂಂಜರ ಬಹಿರಂಗ ಪ್ರಚಾರ ಸಭೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

Suddi Udaya

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!