April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಮಾಲಾಡಿ ಗ್ರಾ.ಪಂ.ಗೆ ಭೇಟಿ

ಮಾಲಾಡಿ: ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಇವರು ಮಾಲಾಡಿ ಗ್ರಾಮ ಪಂಚಾಯತ್ ಕಛೇರಿಗೆ ಭೇಟಿ ನೀಡಿದರು.

ಮಕ್ಕಳ ಮತ್ತು ಮಹಿಳಾ ರಕ್ಷಣಾ ಕಾವಲು ಸಮಿತಿಯ ಸಭಾ ನಡವಳಿ, ಮಕ್ಕಳ ಗ್ರಾಮ ಸಭೆಯ ನಡವಳಿ, ಶಿಕ್ಷಣ ಕಾರ್ಯಪಡೆಯ ವಿವರ, ಶೇಕಡಾ 25ರಲ್ಲಿ ಮಹಿಳೆಯರು ಹಾಗೂ ಮಕ್ಕಳಿಗೆ ಮಾಡಿರುವ ವೆಚ್ಛದ ವಿವರ, ಶೇ.5 ರಲ್ಲಿ ಮಾಡಿರುವ ವೆಚ್ಚದ ವಿವರ ಹಾಗೂ ಶೇ.2 ರ ವೆಚ್ಚದ ವಿವರಗಳನ್ನು ಪರಿಶೀಲಿಸಿ ಪಂಚಾಯತ್ ನ ಕಾರ್ಯ ವೈಖರಿಯನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪುನೀತ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಜಿಲ್ಲಾ ರಕ್ಷಣಾಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರೀಯ ಆಗ್ನೇಸ್, ಪಂಚಾಯತ್ ಸದಸ್ಯರಾದ ಎಸ್. ಬೇಬಿ ಸುವರ್ಣ, ಉಮೇಶ್, ಐರಿನ್ ಮೋರಸ್, ವಿದ್ಯಾ ಸಾಲಿಯಾನ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜಶೇಖರ್ ರೈ, ಕಾರ್ಯದರ್ಶಿ ಯಶೋಧರ ಶೆಟ್ಟಿ, ಗ್ರಾಮ ಸಹಾಯಕ ಗುಣಕರ, ಇನ್ನಿತರ ಅಧಿಕಾರಿಗಳು, ಪಂಚಾಯತ್ ಸಿಬ್ಬಂಧಿಗಳು ಉಪಸ್ಥಿತರಿದ್ದರು.

Related posts

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

Suddi Udaya

ಪಿಲ್ಯ: ಧರೆಗುರುಳಿದ ಬೃಹತ್ ಗಾತ್ರದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯ ಯುವಕರಿಂದ ತೆರವು ಕಾರ್ಯ, ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

Suddi Udaya

ಬೆಳ್ತಂಗಡಿ: ತಾ| ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಪ.ಜಾತಿ ಪ. ಪಂಗಡದ ಹಿತರಕ್ಷಣಾ ಸಮಿತಿ ಸಭೆ

Suddi Udaya
error: Content is protected !!