29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರುಣಾಶ್ರಯ ಸೇವಾ ಟ್ರಸ್ಟ್‌ನಿಂದ ವಾರದ ಒಂದು ದಿನದ ಸೇವಾ ಕಾರ್ಯಕ್ರಮ: ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ದಿನಸಿ ಸಾಮಾಗ್ರಿ ವಿತರಣೆ

ಬೆಳ್ತಂಗಡಿ: ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ನೆನಪಿನಲ್ಲಿ ಅವರ ಆದರ್ಶಪ್ರಾಯವಾದ ಜೀವಮಾನದ ಸಲುವಾಗಿ ಕರುಣಾಶ್ರಯ ಸೇವಾ ಟ್ರಸ್ಟ್, ಮಂಗಳೂರು ವಾರದ ಒಂದು ದಿನದ ಸೇವಾ ಕಾರ್ಯಕ್ರಮ ಸೇವೆಯ ಸಾಥ್ ಸೇವಾ ಯೋಜನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಮೊದಲನೇ ಸೇವಾ ಕಾರ್ಯಕ್ರಮವಾಗಿ ಬಾಲ್ಯದಲ್ಲಿ ಆದ ಆಚಾತುರ್ಯದಿಂದ ಕೈ ಕಳೆದುಕೊಂಡು ಅಂಗವೈಕಲ್ಯವನ್ನ ಒಂದು ವೈಕಲ್ಯವೇ ಅಲ್ಲ ಎಂದು ತನ್ನ ಬದುಕಿನುದ್ದಕ್ಕೂ ಹೋರಾಟದ ಜೀವನದಿಂದ ಆದರ್ಶರಾದ ಸಂಧ್ಯಾ ಸುವರ್ಣ ಇವರನ್ನ ಗೌರವಿಸುವ ಮೂಲಕ ಮತ್ತು ಎರಡನೇ ಸೇವಾ ಕಾರ್ಯಕ್ರಮವಾಗಿ ಹೊನ್ನಯ್ಯ ಅವರ ನೇತೃತ್ವದಲ್ಲಿ ನಡೆಯುತ್ತಿರುವ ವೃದ್ಧರ ಸೇವಾಶ್ರಮ ಶ್ರೀ ಗುರು ಚೈತನ್ಯ ಸೇವಾಶ್ರಮ ಗುಂಡೂರಿಗೆ ದಿನಸಿ ವಸ್ತುಗಳನ್ನ ನೀಡುವ ಮುಖೇನ ನಡೆಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಉಪಾಧ್ಯಕ್ಷ ಪ್ರಮೋದ್ ಶೆಟ್ಟಿ, ಕೋಶಾಧಿಕಾರಿ ನಿತಿನ್ ವಿ ಶೆಟ್ಟಿ, ಕಾರ್ಯದರ್ಶಿ ಸುಮಲತಾ, ಜೊತೆ ಕಾರ್ಯದರ್ಶಿ ಪ್ರಶಾಂತ್, ಟ್ರಸ್ಟಿಗಳಾದ ಆಶಾ ಡಿ ಸುಧೀರ್, ಯಶವಂತ್, ಸೋಮನಾಥ, ಸುಶ್ಮೀತಾ ಭಾಗವಹಿಸಿದ್ದರು.

Related posts

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

Suddi Udaya

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya

ಕಳಿಯ: ಬೈಕ್ ನಲ್ಲಿ ಹೋಗುತ್ತಿದ್ದ‌ ಸಹ ಸಾವರೆ ಮಹಿಳೆಯೋವ೯ರ ಕಾಲು ಸೈಲೇಸರ್‌ ಮತ್ತು ಚೇಸ್‌ ನಡುವೆ ಸಿಲುಕಿ ಗಾಯ

Suddi Udaya

ಜು.13: ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ (ಆಟಿ) ಸೇಲ್: 10% ಫ್ಲ್ಯಾಟ್, 50-50 ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಡಾ|| ವೀರೇoದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ವರ್ಧoತಿ ಪ್ರಯುಕ್ತ ಗೌರವಾರ್ಪಣೆ

Suddi Udaya
error: Content is protected !!